ಬಾಗಲಕೋಟೆ: ಅಂಬುಲೆನ್ಸ್ ನಲ್ಲಿ ಸಾಗಿಸುವ ವೇಳೆ ಗರ್ಭಿಣಿಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಘಟನೆ ಬಾಗಲಕೋಟೆ ತಾಲೂಕಿನ ಚೌಡಾಪುರ ಗ್ರಾಮದ ಬಳಿ ನಡೆದಿದೆ.
ಮಹಾರಾಷ್ಟ್ರ ಮೂಲದ 24 ವರ್ಷದ ಮನಿಷಾ ಸುಧೀರ್ ಚೌಹಾನ್ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ. ಕಬ್ಬು ಕಟಾವು ಮಾಡುವುದಕ್ಕಾಗಿ ಪತಿ ಸುಧೀರ್ ಹಾಗೂ ಕುಟುಂಬ ಸಮೇತ ಚೌಡಾಪುರಕ್ಕೆ ಮನಿಷಾ ಬಂದಿದ್ದರು. ಹೀಗಾಗಿ ಸುಧೀರ್ ದಂಪತಿ ಗ್ರಾಮದ ರೈತರೊಬ್ಬರ ಹೊಲದಲ್ಲಿ ಗುಡಿಸಲು ಹಾಕಿಕೊಂಡು ವಾಸವಿದ್ದರು. ಇದನ್ನೂ ಓದಿ: 3 ಗಂಡು 1 ಹೆಣ್ಣು ಸೇರಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
ಮನಿಷಾ ಅವರಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಅಂಬುಲೆನ್ಸ್ ಮೂಲಕ ಮನಿಷಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ ಮಾರ್ಗಮಧ್ಯೆ ಮನಿಷಾ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಬಳಿಕ ಅಂಬುಲೆನ್ಸ್ ಸಿಬ್ಬಂದಿ ಮನಿಷಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮನಿಷಾ ಚೌಹಾಣ್ ಅವರಿಗೆ ಇದು ಮೊದಲ ಹೆರಿಗೆಯಾಗಿದ್ದು, ತಾಯಿ ಮಕ್ಕಳು ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.