ಚಿಕ್ಕೋಡಿ: ಮಳೆ ಇಲ್ಲದೆ ಬರದಿಂದ ತತ್ತರಿಸಿದ್ದ ಕೃಷ್ಣಾ ನದಿ ತೀರದ ಜನ ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಬೇಸಿಗೆ ಕಾಲದಲ್ಲಿ ನೀರು ಬಿಡದ ಮಹಾರಾಷ್ಟ್ರ ಸರಕಾರ ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಕೃಷ್ಣಾ ನದಿಗೆ ನೀರು ಬಿಟ್ಟಿದೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಮೂಲಕ ಮಹಾರಾಷ್ಟ್ರ ಸರಕಾರ 1 ಸಾವಿರ ಕ್ಯೂಸೆಕ್ ನೀರು ಹರಿ ಬಿಡುತ್ತಿದೆ. ಇದರಿಂದ ನೀರಿಲ್ಲದೆ ತತ್ತರಿಸಿ ಹೋಗಿದ್ದ ಕೃಷ್ಣಾ ನದಿ ತೀರದ ಜನ ನಿರಾಳರಾಗಿದ್ದಾರೆ. ಚಿಕ್ಕೋಡಿ, ಅಥಣಿ ಹಾಗೂ ರಾಯಬಾಗ ತಾಲೂಕುಗಳ ರೈತರು ಹಾಗೂ ಸಾರ್ವಜನಿಕರು ಕುಡಿಯುವ ನೀರು ಯೋಜನೆ ಸೇರಿದಂತೆ ಕೃಷಿಗಾಗಿ ನೀರು ಬಂದಿರುವ ಕಾರಣ ಸಂತಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನೀರು ಅಥಣಿ ತಾಲೂಕಿನವರೆಗೂ ಹರಿದ ಕಾರಣ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ಇತ್ತ ಯಾದಗಿರಿಯಲ್ಲಿ ಗ್ರಾಮ ವಾಸ್ತವ್ಯ ಮುಗಿಸಿರುವ ಸಿಎಂ ಅವರ ಕಲಬುರಗಿ ಪ್ರಯಾಣ ಕ್ಯಾನ್ಸಲ್ ಆಗಿದೆ. ಯಾಕಂದರೆ ಭಾರೀ ಮಳೆಯಿಂದಾಗಿ ಕಲಬುರಗಿಯ ಅಫಜಲಪುರ ತಾಲೂಕಿನ ಹೆರೂರು(ಬಿ) ಗ್ರಾಮದಲ್ಲಿನ ಸಿಎಂ ಅವರ ಹಳ್ಳಿವಾಸ ರದ್ದಾಗಿದೆ.
[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]