ನಂದಿ ಗ್ರಾಮದಲ್ಲಿ ಅದ್ಧೂರಿ ಶಿವೋತ್ಸವ

Public TV
1 Min Read
NANDHI SHIVOSTHVA

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಂದು ಚಿಕ್ಕಬಳ್ಳಾಪುರ ತಾಲೂಕು ನಂದಿ ಗ್ರಾಮದಲ್ಲಿರುವ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಶಿವೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ಆರಂಭವಾಗಿದೆ.

NANDHI SHIVOSTHVA 1

ಕ್ಷೇತ್ರದ ಶಾಸಕ, ಸಚಿವ ಡಾ.ಕೆ ಸುಧಾಕರ್ ಫೌಂಡೇಶನ್ ವತಿಯಿಂದ ಇದೇ ಪ್ರಪ್ರಥಮ ಬಾರಿಗೆ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ನಂದಿ ಶಿವೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಶಿವೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಿರಿಗೆರೆ ಶಿವಾಚಾರ್ಯ ಶ್ರೀಗಳು ಹಾಗೂ ಸದ್ಗುರು ಮಧುಸೂದನಸಾಯಿ ಶಂಖ ಊದುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: ಗೋಕರ್ಣ, ಮುರುಡೇಶ್ವರದಲ್ಲಿ ವಿಜ್ರಂಭಣೆಯ ಶಿವರಾತ್ರಿ ಆಚರಣೆ

NANDHI SHIVOSTHVA 2

ಶಿವಲಿಂಗಕ್ಕೆ ಅಭಿಷೇಕ ಮಾಡುವ ಮೂಲಕ ಶಿವೋತ್ಸವ ಕಾರ್ಯಕ್ರಮ ಅರಂಭವಾಯಿತು. ಶಿವರಾತ್ರಿ ಜಾಗರಣೆ ಪ್ರಯುಕ್ತ ವೇದಿಕೆ ಕಾರ್ಯಕ್ರಮದ ನಂತರ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುಲಿವೆ. ಈ ನಂದಿ ಶಿವೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಹಾಡುಗಾರರಾದ ಅನನ್ಯ ಭಟ್, ರಘು ದೀಕ್ಷಿತ್, ವಿಜಯ್ ಪ್ರಕಾಶ್, ಭರತನಾಟ್ಯ ಕಲಾವಿದೆ ಲಕ್ಷ್ಮೀ ಗೋಪಾಲಸ್ವಾಮಿ, ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿ ತಮ್ಮ ಕಲಾ ಪ್ರದರ್ಶನ ಮಾಡಲಿದ್ದಾರೆ. ಜೊತೆಗೆ ನಗೆ ಹಬ್ಬ ಕಾರ್ಯಕ್ರಮ ಸಹ ಆಯೋಜನೆ ಮಾಡಲಾಗಿದ್ದು ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಲೇಸರ್ ಶೋ ಹಾಗೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ ಜೆಪಿ ಪಾರ್ಕ್‌ನಲ್ಲಿ ಅಹೋರಾತ್ರಿ ಕಾರ್ಯಕ್ರಮ – 1 ಸಾವಿರ ಸಾಧಕರಿಗೆ ಸನ್ಮಾನ

NANDHI SHIVOSTHVA 3

ವೈಭವದ ಶಿವೋತ್ಸವದ ಅಂಗವಾಗಿ ಇಡೀ ದೇವಾಲಯಕ್ಕೆ ಹೂವಿನ ಅಲಂಕಾರ ಮಾಡಲಾಗಿದ್ದು, ನಾಳೆ ನಂದಿ ಶ್ರೀ ಭೋಗನಂದಿಶ್ವರನ ಜೋಡಿ ಬ್ರಹ್ಮ ರಥೋತ್ಸವ ನೆರವೇರಲಿದೆ. ಶಿವರಾತ್ರಿ ಹಿನ್ನೆಲೆ ಈಗಾಗಲೇ ಸಾವಿರಾರು ಮಂದಿ ಭಕ್ತರು ನಂದಿ ಗ್ರಾಮದ ಭೋಗನಂದೀಶ್ವರನ ಆಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ

Share This Article
Leave a Comment

Leave a Reply

Your email address will not be published. Required fields are marked *