ಬೆಂಗಳೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆಪಿ ಪಾರ್ಕ್ನಲ್ಲಿ (Mahashivratri Celebration In JP Park Bengaluru) ಪ್ರತಿವರ್ಷದಂತೆ ಈ ವರ್ಷವೂ ಅದ್ಧೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಸ್ಟಾರ್ ನಟರು, ಕಾಮಿಡಿ ಕಿಲಾಡಿಯ ಕಲಾವಿದರು, ಗಾಯಕರು, ನೃತ್ಯಗಾರರಿಂದ ಇಡೀ ರಾತ್ರಿ ಕಾರ್ಯಕ್ರಮ ನಡೆಯುತ್ತಿದೆ. ರ್ಯಾಪರ್ ಚಂದನ್ ಶೆಟ್ಟಿ ಗಾಯನ ನೆರೆದಿದ್ದವರನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತು. ಅದ್ಧೂರಿ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಡಾ. ಮಂಜುನಾಥ್, ಶಾಸಕ ಮುನಿರತ್ನ, ಆರ್.ಅಶೋಕ್, ಅಶ್ವಥ್ ನಾರಾಯಣ್ ಹಾಗೂ ನಟ ದರ್ಶನ್ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದ್ರು.
ಇತ್ತ ಬೆಂಗಳೂರಿನ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾ ಸಲ್ಲಿಸಲಾಗ್ತಿದೆ. ಮಲ್ಲೇಶ್ವರದ ಕಾಡುಮಲ್ಲೆಶ್ವರ ದೇವಾಲಯದಲ್ಲಿ ಶಿವರಾತ್ರಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದ್ರು. ಇನ್ನು, ನಗರದ ಹಲವೆಡೆ ಶಿವರಾತ್ರಿ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ. ಇದನ್ನೂ ಓದಿ: ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ನೆರವೇರಿಸಿದ ಹಿಂದೂಗಳು
i