ಮಂಡ್ಯ: ಶಿವರಾತ್ರಿ ಹಬ್ಬದ ಜಾಗರಣೆ ರಾತ್ರಿ ಚಾಕುವಿನಿಂದ ಚುಚ್ಚಿ ಜೋಡಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ನಡೆದಿದೆ.
ಕೋಳಿ ಸುರೇಶ್ ಹಾಗೂ ನಾಗರಾಜು ಕೊಲೆಯಾದ ದುರ್ದೈವಿಗಳು. ಕೋಳಿ ಸುರೇಶ್ ಹಾಗೂ ನಾಗರಾಜು ಮಹದೇಶ್ವರಪುರ ಗ್ರಾಮದವರಾಗಿದ್ದು, ಅದೇ ಗ್ರಾಮದ ರೌಡಿಶೀಟರ್ ಕೃಷ್ಣ, ಸುರೇಶ್ ಹಾಗೂ ಸಹಚರರು ಈ ಕೃತ್ಯ ಎಸಗಿದ್ದಾರೆ.
ಪೊಲೀಸರು ಈಗಾಗಲೇ ಕೃಷ್ಣನನ್ನು ವಶಕ್ಕೆ ಪಡೆದುಕೊಂಡಿದ್ದು, ಕೊಲೆಗೆ ಪ್ರೇಮ ಪ್ರಕರಣ ಹಾಗೂ ಹಣಕಾಸು ವ್ಯವಹಾರವೇ ಕಾರಣ ಎಂದು ಹೇಳಲಾಗುತ್ತಿದೆ. ಕೊಲೆಯಾದ ಕೋಳಿ ಸುರೇಶ್ ಮೈಸೂರಿನಲ್ಲಿ ಆಟೋ ಓಡಿಸುತ್ತಿದ್ದರು. ಇತ್ತ ನಾಗರಾಜು ಜೆಸಿಬಿ ಯಂತ್ರ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು.
ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.