ಬೀದರ್: ಈ ರೀತಿ ಹಿಂಸಾತ್ಮಕ ರಾಜನೀತಿಯಿಂದಲೇ ರಾಷ್ಟ್ರಪಿತ ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹತ್ಯೆಯಾಗಿದ್ದು ಎಂದು ಕಾಂಗ್ರೆಸ್ (Congress) ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Surjewala) ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೊಡೆದು ಹಾಕಿ ಎಂದು ಸಚಿವ ಅಶ್ವಥ್ ನಾರಾಯಣ್ (Ashwath Narayan) ಪ್ರಚೋದನಾಕಾರಿ ಹೇಳಿಕೆ ಪ್ರಸ್ತಾಪಿಸಿ ಬೀದರ್ನಲ್ಲಿ (Bidra) ಮಾತನಾಡಿದ ಸುರ್ಜೆವಾಲಾ, ಸಿದ್ದರಾಮಯ್ಯ ಕೊಲೆ ಮಾಡಲು ಅಶ್ವಥ್ ನಾರಾಯಣ್ ಹೇಳುತ್ತಿಲ್ಲ. ಬದಲಿಗೆ ಪ್ರಧಾನಿ ಮೋದಿ, ಜೆಪಿ ನಡ್ಡಾ ಹಾಗೂ ಸಿಎಂ ಬೊಮ್ಮಾಯಿ ಹೇಳುತ್ತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
ಮೋದಿಜೀ, ನಡ್ಡಾಜೀ, ಬೊಮ್ಮಾಯಿಜೀ ನೀವು ಮರೆತು ಹೋಗಿದ್ದೀರಾ? ಈ ರೀತಿ ಹಿಂಸಾತ್ಮಕ ರಾಜನೀತಿಯಿಂದಲೇ ಮಹಾತ್ಮ ಗಾಂಧಿ, ಇಂದಿರಾ ಗಾಂಧಿನಮ್ಮ ಪ್ರೀತಿಯ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿ ತುಂಡು ತುಂಡಾಗಿ ಹತ್ಯೆಯಾಗಿದ್ದು. ಇದೇ ಹಿಂಸಾತ್ಮಕ ರಾಜನೀತಿಯಿಂದಲೇ ಇನ್ನೂ ಅನೇಕರು ದೇಶಕ್ಕಾಗಿ ರಕ್ತ ಕೊಟ್ಟಿದ್ದು. ಒಬ್ಬ ಕಾಂಗ್ರೆಸ್ ನಾಯಕನಿಗೆ ಹೊಡೆದರೆ ಒಬ್ಬರು, ಇಬ್ಬರು, ಮೂವರು ಬರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಸುರ್ಜೆವಾಲಾ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಆಸ್ತಿ ಆರೋಪ- IAS ಅಧಿಕಾರಿ ಆಸ್ತಿಯ Exclusive ಡೀಟೆಲ್ಸ್ ಇಲ್ಲಿದೆ
ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಹೊಡೆಯಲು ಬರುತ್ತಿದ್ದಾರೆ ಎಂದರೆ ಇದರ ಅರ್ಥ ಬಡವರ, ಎಸ್ಸಿ, ಎಸ್ಟಿ, ಒಬಿಸಿ, ಅಲ್ಪಸಂಖ್ಯಾತ, ಮಹಿಳೆಯರ, ರೈತರ ಧ್ವನಿ ಬಂದ್ ಮಾಡಲು ಎಂದು ಸುರ್ಜೆವಾಲಾ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಂದೆಂದೂ ಆಗದ ಅಭಿವೃದ್ಧಿ ಕಳೆದ 5 ವರ್ಷಗಳಲ್ಲಿ ಆಗಿದೆ: ತೇಜಸ್ವಿ ಸೂರ್ಯ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k