ತುಮಕೂರು: ಮಹಾತ್ಮ ಗಾಂಧೀಜಿ ಅವರ ಮೊಮ್ಮಗಳಾದ ಸುಮಿತ್ರಾ ರಾಮ್ ದಾಸ್ ಗಾಂಧಿ ಅವರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದಿದ್ದಾರೆ. ಮಹಾತ್ಮ ಗಾಂಧಿ ಮೂರನೇ ಮಗ ರಾಮ್ ದಾಸ್ ಗಾಂಧಿ ಪುತ್ರಿ ಸಮಿತ್ರಾ ರಾಮ್ ದಾಸ್ ಗಾಂಧಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಸಿದ್ದಗಂಗಾ ಶ್ರೀಗಳಿಗೆ ಆಸ್ಪತ್ರೆಯಲ್ಲೇ ವೈದ್ಯರು ಚಿಕಿತ್ಸೆಯನ್ನು ಮುಂದುವರಿಸಿದ್ದು, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಬೆಳಗ್ಗೆ ಕಿರಿಯ ಶ್ರೀಗಳ ಸಹಾಯದೊಂದಿಗೆ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದರು.
ಸಿದ್ದಗಂಗಾ ಮಠಕ್ಕೆ ಬಿಜಿಎಸ್ ವೈದ್ಯ ಡಾ .ರವೀಂದ್ರ ಆಗಮಿಸಿ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದರು. ವೈದ್ಯರು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಮಾಹಿತಿಯಂತೆ ಶ್ರೀಗಳ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಆಗಿದೆ. ಸ್ವಂತ ಶಕ್ತಿಯಿಂದ ಶ್ರೀಗಳ ಸತತ 3 ರಿಂದ 4 ಗಂಟೆ ಉಸಿರಾಟ ನಡೆಸಿದ್ದಾರೆ. ಶ್ವಾಸಕೋಶದಲ್ಲಿ ನೀರು ಶೇಖರಣೆ ಆಗುತ್ತಿರುವುದರಿಂದ ಅದನ್ನು ಹೊರತೆಗೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಶ್ರೀಗಳ ಚಿಕಿತ್ಸೆಗೆ ಶಿಷ್ಯರು ಮಂತ್ರ, ಭಜನೆಗಳನ್ನ ಕೇಳಿಸುವ ಮೂಲಕ ಸಹಾಯ ಮಾಡುತ್ತಿದ್ದು, ಇಂದು ಭಾನುವಾರ ಆದ ಕಾರಣ ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಹೀಗಾಗಿ ಮಠದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv