Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರಾಗ್ತಾರೆ ʻಮಹಾʼ ಸಾರಥಿ? – ಇಂದು ಮೂರು ಕಡೆ ಪ್ರತ್ಯೇಕ ಸಭೆ, ನಾಳೆಯೇ ಸಿಎಂ ಆಯ್ಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾರಾಗ್ತಾರೆ ʻಮಹಾʼ ಸಾರಥಿ? – ಇಂದು ಮೂರು ಕಡೆ ಪ್ರತ್ಯೇಕ ಸಭೆ, ನಾಳೆಯೇ ಸಿಎಂ ಆಯ್ಕೆ?

Latest

ಯಾರಾಗ್ತಾರೆ ʻಮಹಾʼ ಸಾರಥಿ? – ಇಂದು ಮೂರು ಕಡೆ ಪ್ರತ್ಯೇಕ ಸಭೆ, ನಾಳೆಯೇ ಸಿಎಂ ಆಯ್ಕೆ?

Public TV
Last updated: November 24, 2024 1:47 pm
Public TV
Share
3 Min Read
mahayuti ajit pawar devendra fadnavis eknath shinde
SHARE

– ನ.26ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ?

ಮುಂಬೈ: ಮಹಾರಾಷ್ಟ್ರದ (Maharashtra) 288 ಕ್ಷೇತ್ರಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟ ಭಾರಿ ಬಹುಮತದೊಂದಿಗೆ ಐತಿಹಾಸಿಕ ಗೆಲುವು ಸಾಧಿಸಿದೆ. ಕಳೆದ 50 ವರ್ಷಗಳಲ್ಲಿ ಚುನಾವಣಾ ಪೂರ್ವ ಮೈತ್ರಿ ಇದೇ ಮೊದಲ ಬಾರಿ ಇಂತಹ ಅಭೂತಪೂರ್ವ ಗೆಲುವು ಸಾಧಿಸಿದೆ ಎಂದು ಪ್ರಧಾನಿ ಮೋದಿ (PM Modi) ಬಣ್ಣಿಸಿದ್ದಾರೆ. ಇದೀಗ ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಕುತೂಹಲ ಹೆಚ್ಚಿಸಿದೆ. ಜೊತೆಗೆ ಪ್ರಬಲ ಖಾತೆಗಳ ಹಂಚಿಕೆ ಯಾರ ತೆಕ್ಕೆಗೆ ಬೀಳಲಿದೆ ಎಂಬ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.

narendra modi 1

ಈ ಬೆಳವಣಿಗೆಯ ನಡುವೆ ಮಹಾಯುತಿ (Mahayuti) ಮೈತ್ರಿ ಕೂಟದ ಪಕ್ಷಗಳು ಇಂದು (ಭಾನುವಾರ) ಪ್ರತ್ಯೇಕವಾಗಿ ಉನ್ನತ ಮಟ್ಟದ ಸಭೆಗಳನ್ನ ಕರೆದಿದೆ. ಮೈತ್ರಿಕೂಟದ ಎಲ್ಲ ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಸಿಎಂ ಹುದ್ದೆ ಸೇರಿದಂತೆ ಸಂಪುಟದ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

Maharashtra Assembly Election Eknath Shindhe

ಮುಂಬೈನಲ್ಲಿರುವ ದೇವೇಂದ್ರ ಫಡ್ನವೀಸ್ ಅವರ ಅಧಿಕೃತ ನಿವಾಸದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಇತ್ತ ಏಕನಾಥ್ ಶಿಂಧೆ ಅವರು ಬಾಂದ್ರಾದಲ್ಲಿರುವ ಹೋಟೆಲ್‌ನಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲಾ ಶಾಸಕರೊಂದಿಗೆ ಸಭೆ ಕರೆದಿದ್ದಾರೆ. ಏತನ್ಮಧ್ಯೆ, ಎನ್‌ಸಿಪಿ ಅಜಿತ್ ಪವಾರ್ ಬಣವು ಮುಂಬೈನ ಅವರ ಅಧಿಕೃತ ನಿವಾಸ ದೇವಗಿರಿ ಬಂಗಲೆಯಲ್ಲಿ ಸಭೆ ನಡೆಸುತ್ತಿದೆ. ಇಂದು ಪ್ರತ್ಯೇಕ ಸಭೆ ನಡೆಸಿದ ಬಳಿಕ ಸೋಮವಾರ (ನ.25) ಮಹಾಯುತಿಯ ಎಲ್ಲ ಶಾಸಕರು ಒಟ್ಟಾಗಿ ಸಭೆ ಸೇರಲಿದ್ದಾರೆ. ಅಲ್ಲಿಯೇ ಮುಂದಿನ ಸಿಎಂ ಯಾರು ಎಂಬುದು ನಿರ್ಧಾರವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

288 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ 233 ಸ್ಥಾನ ಗೆದ್ದು ಅಧಿಕಾರದ ಗದ್ದುಗೆ ಏರಿದೆ. ಆದ್ರೆ ಘಟಾನುಘಟಿ ನಾಯಕರುಳ್ಳ ಮಹಾ ವಿಕಾಸ್‌ ಅಘಾಡಿ ಕೇವಲ 49 ಸ್ಥಾನ ಗೆದ್ದು, ಮುಖಭಂಗ ಅನುಭವಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಮುಂದಿನ ಸಿಎಂ ಯಾರು? – ದೇವೇಂದ್ರ ಫಡ್ನವಿಸ್‌ ಹೇಳಿದ್ದೇನು?

ಫಡ್ನವಿಸ್‌ ಆಗ್ತಾರಾ ಸಿಎಂ?
ಈಗಾಗಲೇ ಸಿಎಂ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲರ ಜೊತೆ ಸಮಾಲೋಚನೆ ನಡೆಸಿದ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಅಮಿತ್‌ ಶಾ ಮೈತ್ರಿಕೂಟದ ನಾಯಕರಿಗೆ ತಿಳಿಸಿದ್ದಾರೆಂದು ಫಡ್ನವಿಸ್‌ ಮಾಹಿತಿ ನೀಡಿದ್ದಾರೆ.

2022 ರಲ್ಲಿ 40 ಶಾಸಕರೊಂದಿಗೆ ಏಕನಾಥ್‌ ಶಿಂಧೆ ಅವರು ಬಿಜೆಪಿ ಮನೆ ಬಾಗಿಲಿಗೆ ಹೋದರು. ಶಿವಸೇನೆಯ ವಿಭಜನೆಯಿಂದಾಗಿ ಪಕ್ಷದ ಮುಖ್ಯಸ್ಥ ಉದ್ಧವ್‌ ಠಾಕ್ರೆ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಪರಿಣಾಮ ಎಂವಿಎ ಸರ್ಕಾರ ಪತನಗೊಂಡಿತು. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

ಮುಂದೆ ಬಿಜೆಪಿ ನೇತೃತ್ವದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರಲು ವೇದಿಕೆ ಸಜ್ಜಾಯಿತು. ಆಗ ಪಕ್ಷದಲ್ಲಿ ಅನುಭವಿ ವ್ಯಕ್ತಿಯಿದ್ದರೂ ಬಿಜೆಪಿ ಅಚ್ಚರಿ ಎಂಬಂತೆ ಏಕನಾಥ್‌ ಶಿಂಧೆ ಅವರನ್ನೇ ಮಹಾರಾಷ್ಟ್ರ ಸಿಎಂ ಮಾಡಿತು. ಇದರ ನಡುವೆ ಎನ್‌ಸಿಪಿ ಕೂಡ ಇಬ್ಭಾಗವಾಗಿ ಅಜಿತ್‌ ಪವಾರ್‌ ಬಣ ಬಿಜೆಪಿ ಜೊತೆ ಕೈಜೋಡಿಸಿತು.

ಬಿಜೆಪಿ ಪ್ರಚಾರದ ನೇತೃತ್ವ ವಹಿಸಿದ್ದ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ. ಪ್ರಬಲ ಮರಾಠ ನಾಯಕನಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡ ಏಕನಾಥ್ ಶಿಂಧೆ ಮತ್ತು 81 ಪ್ರತಿಶತದಷ್ಟು ಪ್ರಭಾವಶಾಲಿ ಸ್ಟ್ರೈಕ್ ರೇಟ್ ಸಾಧಿಸಿದ ಅವರು ಉನ್ನತ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ.

ನ.26ರಂದು ಪ್ರಮಾಣ ವಚನ ಸ್ವೀಕಾರ:
ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ನವೆಂಬರ್‌ 26ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ದೇವೇಂದ್ರ ಫಡ್ನವಿಸ್‌ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

TAGGED:bjpdevendra fadnavisEknath ShindemaharashtraMaharashtra cmMahayutiNCPShivSenaದೇವೇಂದ್ರ ಫಡ್ನವಿಸ್ಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
5 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
27 minutes ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
43 minutes ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
47 minutes ago
Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?