ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ತಿನ್ನುವ, ಮದ್ಯವನ್ನು ಸೇವಿಸುವ ದೇವತೆಯಾಗಿ ಕಾಣುತ್ತಾಳೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ ಇನ್ನೂ ಕೆಲವು ಸ್ಥಳಗಳಲ್ಲಿ ಧರ್ಮದ ನಿಂದನೆ ಆಗಿರುತ್ತದೆ ಎಂದು ತಿಳಿಸಿದರು.
ಅದಕ್ಕೆ ಉದಾಹರಣೆ ಎಂಬಂತೆ ಸಿಕ್ಕಿಂನಲ್ಲಿ ಕಾಳಿ ದೇವಿಗೆ ವಿಸ್ಕಿಯನ್ನು ನೀಡುತ್ತಾರೆ. ಆದರೆ ಉತ್ತರ ಪ್ರದೇಶದಲ್ಲಿ ವಿಸ್ಕಿಯನ್ನು ಪ್ರಸಾದ ಎಂದು ಹೇಳಿದರೆ ಅವರು ಅದನ್ನು ಪ್ರಸಾದ ಎಂದರೆ ಧರ್ಮ ನಿಂದನೆ ಆಗುತ್ತದೆ ಎಂದರು. ಇದನ್ನೂ ಓದಿ: ಸಾರ್ವಜನಿಕವಾಗಿ ಕುರಾನ್ ಸುಟ್ಟಿದ್ದಕ್ಕೆ ಆಕ್ರೋಶ – ನಾಯಕನ ಕಾರನ್ನು ಅಪಘಾತಗೈದವರು ಅರೆಸ್ಟ್
ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಎಸಿಬಿ ದಾಳಿಗೆ ಒಳಗಾಗುವವರು ಶುದ್ಧರಾಗಿದ್ರೆ ಏಕೆ ಹೆದರಬೇಕು: ಬಿ.ಸಿ.ನಾಗೇಶ್ ಟಾಂಗ್