ಬೆಲೆ ಕುಸಿತ ಮೆಕ್ಕೆಜೋಳ ಬೆಳೆ ನಾಶ ಮಾಡಿದ ಅನ್ನದಾತ

Public TV
1 Min Read
hvr crop

ಹಾವೇರಿ: ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ.

ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಮಾದೇವಪ್ಪ ಒಡೇನಪುರ ಅವರು ಒಂದು ಎಕರೆ ಇಪ್ಪತ್ತು ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದ್ದಾರೆ.

vlcsnap 2020 03 17 12h48m54s132

ಮೆಕ್ಕೆಜೋಳದ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದ್ದರಿಂದ ರೈತ ಈ ರೀತಿ ಮಾಡಿದ್ದಾರೆ. ಒಂದು ಕ್ವಿಂಟಾಲ್ ಮೆಕ್ಕೆಜೋಳದ ಬೆಲೆ ಕೇವಲ ಒಂದು ಸಾವಿರ ರೂಪಾಯಿಗೆ ಕುಸಿದಿದ್ದರಿಂದ ಬೇಸತ್ತು ಬೆಳೆ ನಾಶ ಮಾಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಪ್ರತಿ ಕ್ವಿಂಟಾಲಿಗೆ ಎರಡು ಸಾವಿರ ರೂಪಾಯಿವರೆಗೆ ಮೆಕ್ಕೆಜೋಳ ಮಾರಾಟವಾಗಿತ್ತು. ಇದೀಗ ಬೆಲೆ ಒಂದು ಸಾವಿರ ರೂ.ಗೆ ಕುಸಿದಿದ್ದರಿಂದ ರೈತ ಬೆಳೆ ನಾಶ ಮಾಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *