Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು

Districts

ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು

Public TV
Last updated: March 13, 2020 8:41 am
Public TV
Share
2 Min Read
KWR SEA copy
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಹವಾಮಾನ ಮತ್ತು ಸಮುದ್ರದ ವಾತಾವರಣದಲ್ಲಿ ಬದಲಾವಣೆಯಿಂದಾಗಿ ಸಮುದ್ರದಲ್ಲಿ ಸೃಷ್ಟಿಯ ವೈಚಿತ್ರಗಳು ನಡೆಯುತ್ತಿದೆ. ಕಾರವಾರದ ಗೋವಾ ಗಡಿಗೆ ಅಂಟಿಕೊಂಡಿರುವ ಮಾಜಾಳಿ ಕಡಲ ಬಳಿ ಅಲೆಗಳಲ್ಲಿ ಮಿಂಚಿನ ಬೆಳಕು ಕಾಣತೊಡಗಿದೆ.

ರಾತ್ರಿ ವೇಳೆ ಬೆಳಕು ಗೋಚರವಾಗುತ್ತಿದ್ದು, ಮಾಜಾಳಿಯಿಂದ ಕಪ್ಪು ಮರಳಿನ ಸಮುದ್ರ ಎಂದೇ ಪ್ರಸಿದ್ಧವಾಗಿರುವ ತಿಳಮಾತಿ ಕಡಲತೀರದವರೆಗೂ ಆವರಿಸಿದೆ. ಕಳೆದ ಒಂದು ವಾರದಿಂದ ಸಮುದ್ರದಲ್ಲಿ ಈ ಬೆಳವಣಿಗೆ ಕಾರಣವಾಗುತ್ತಿದೆ. ಈ ಬದಲಾವಣೆಯನ್ನು ಧಾರವಾಡ ವಿಶ್ವವಿದ್ಯಾನಿಲಯದ ಕಡಲ ಜೀವಶಾಸ್ತ್ರಜ್ಞ  ಶಿವಕುಮಾರ್ ಹರಗಿರವರು ಗುರುತಿಸಿದ್ದಾರೆ.

KWR FLASH SEA AV 2 copy 1

ಅಲೆಗಳಲ್ಲಿ ಬೆಳಕು ಮೂಡುತ್ತಿರಲು ಕಾರಣವೇನು?
ಸಮುದ್ರದಲ್ಲಿ ಮಲೀನದಿಂದಾಗಿ ನಾಕ್ಟುಲುಕ ಸೆಂಟನೆಲ್ಸ್ (noctiluca seintillans)ಎಂಬ ಪಾಚಿ ಹೇರಳವಾಗಿ ಬೆಳೆದಿದೆ. ಇದು ರಾತ್ರಿ ವೇಳೆ ಸಮುದ್ರದಲ್ಲಿ ಮಿಂಚಿನಂತೆ ಕಾಣುತಿದ್ದು, ಬೆಳಕನ್ನು ಹೊರಸೂಸುತ್ತಿದೆ. ತನ್ನಲ್ಲಿ ಬೆಳಕನ್ನು ಸೂಸುವ ಶಕ್ತಿ ಹೊಂದಿರುವ ಇದು ಸಮುದ್ರಕ್ಕೆ ಸೇರುವ ತ್ಯಾಜ್ಯಗಳ ಖನಿಜಾಂಶದಿಂದ ಹೆಚ್ಚು ಬೆಳೆದಿದೆ. ಈ ಹಿಂದೆ 2011ರಲ್ಲಿ ಮಂಗಳೂರಿನಲ್ಲಿ, 2017ರಲ್ಲಿ ಉಡುಪಿ, ಕಾರವಾರದ ಕಡಲತೀರದ ಬಳಿ ಹೇರಳವಾಗಿ ಕಾಣಿಸಿಕೊಂಡಿದ್ದವು. ಇವು ಹೆಚ್ಚಾದಾಗ ಸಮುದ್ರ ಹಸಿರಿನಂತೆ ಕಂಗೊಳಿಸುತ್ತವೆ.

ಮೀನುಗಾರಿಕೆಗೂ ಬೀರಲಿದೆ ಇದರ ಪರಿಣಾಮ!
ಜಿಲ್ಲೆಯ ಮೀನುಗಾರರು ಈಗಾಗಲೇ ಮತ್ಸ್ಯ ಕ್ಷಾಮದಿಂದ ಬಳಲುತ್ತಿದ್ದಾರೆ. ಈ ಸಸ್ಯಗಳು ಬೆಳೆದಿದ್ದರಿಂದ ಮೀನುಗಾರಿಕೆ ಮೇಲೂ ಪರಿಣಾಮ ಬೀರುವ ಜೊತೆಗೆ ಮಾರಕವಾಗಿದ್ದು, ಪರಿಸರದ ಅಸಮತೋಲನಕ್ಕೆ ಸಾಕ್ಷಿಯಾಗಿದೆ ಎಂಬುದು ಸಂಶೋಧನೆ ನಿರತ ಕಡಲ ಜೀವಶಾಸ್ತ್ರಜ್ಞ ಡಾ.ಶಿವಕುಮಾರ್ ಹರಗಿ ರವರ ಅಭಿಪ್ರಾಯವಾಗಿದೆ.

KWR FLASH SEA AV 10

ಈ ಪಾಚಿಗಳು ಬೆಳೆಯುವುದರಿಂದ ಮೀನುಗಳು ದೂರ ಹೋಗುತ್ತದೆ ಇದು ಮತ್ಸ್ಯ ಕ್ಷಾಮದ ಸೂಚನೆ. ಈ ಪಾಚಿ ಸಸ್ಯ ಆಕ್ಸಿಜನ್ ತೆಗೆದುಕೊಂಡು ಬೆಳಕನ್ನು ಹೊರಸೂಸುತ್ತದೆ. ದಕ್ಷಿಣ ಕರಾವಳಿಯಲ್ಲಿ ಹೆಚ್ಚು ಪತ್ತೆಯಾಗುತ್ತಿದೆ. ಆಹಾರ ಸಿಕ್ಕಾಗ ಅತಿಯಾಗಿ ಬೆಳೆಯುತ್ತದೆ. ತ್ಯಾಜ್ಯ ಹೆಚ್ಚು ಸಮುದ್ರ ಸೇರುವುದರಿಂದ ಇವು ಹೆಚ್ಚು ಬೆಳೆಯುತ್ತದೆ. ತ್ಯಾಜ್ಯದ ಖನಿಜಾಂಶ ಹಾಗೂ ಸೂರ್ಯನ ಬೆಳಕು ಇವುಗಳ ಆಹಾರ. ಪಶ್ಚಿಮ ಕರಾವಳಿಯಲ್ಲಿ ಆಗುತ್ತಿರುವ ಹೆಚ್ಚಿನ ಮಾಲಿನ್ಯ ಇವುಗಳ ಬೆಳವಣಿಗೆಗೆ ಕಾರಣವಾಗಿದೆ.

ಸದ್ಯ ಕಾರವಾರದ ಸಮುದ್ರದಲ್ಲಿ ಈ ಪಾಚಿಗಳು ಎರಡು ಮೂರು ದಿನ ಉಳಿಯಬಹುದು. ಯಾಕೆಂದರೆ ಬೇಸಿಗೆಯಲ್ಲಿ ಜಾಸ್ತಿ ಪ್ರಮಾಣದಲ್ಲಿ ಪಾಚಿ ಬೆಳೆಯುತ್ತಿದೆ. ಏಳು ದಿನ ಇವು ಬದುಕುತ್ತವೆ. ನಂತರ ಎರಡುಪಟ್ಟಾಗಿ ಬೆಳೆಯುತ್ತದೆ. ಇವುಗಳಲ್ಲಿ ರೆಡ್, ಗ್ರೀನ್ ಟೈಡ್ ಎಂಬ ಜಾತಿಯ ಪ್ರಭೇದ ಪಾಚಿಗಳಿವೆ. ಇವುಗಳು ಟಾಕ್ಸಿನ್ ಹೆಚ್ಚು ಉತ್ಪತ್ತಿ ಮಾಡುತ್ತದೆ. ಕೆಲವೊಮ್ಮೆ ಇವುಗಳು ಉಪಯುಕ್ತವಾದರೆ ಹಲವು ಬಾರಿ ಮಾರಕವಾಗಿ ಪರಿಣಮಿಸುತ್ತದೆ ಎಂಬುದು ಸಂಶೋಧಕರ ಮಾತು.

KWR FLASH SEA AV 16

ಮೀನುಗಾರರಲ್ಲಿ ಹುಟ್ಟಿದ ಭಯ?
ಕಳೆದ ಹಲವು ದಿನದಿಂದ ಸಮುದ್ರದಲ್ಲಿ ಆಗುವ ಈ ಬೆಳವಣಿಗೆ ಮೀನುಗಾರರಲ್ಲಿ ಭಯ ಮೂಡಿಸಿದೆ. ಸ್ಥಳೀಯ ಮೀನುಗಾರರು ಹೇಳುವಂತೆ ಈ ರೀತಿ ಮಿಂಚುಗಳ ಬೆಳಕು ಬಂದರೆ ಸಮುದ್ರದಲ್ಲಿ ಮೀನುಗಳು ಬರುವುದಿಲ್ಲ ಎಂದಿದ್ದಾರೆ.

ಸಂಶೋಧಕರು ಕೂಡ ಇದನ್ನು ಪುಷ್ಟಿಕರಿಸಿದ್ದು, ಸಮುದ್ರಕ್ಕೆ ಮಲೀನ ನೀರುಗಳು ಅತಿ ಹೆಚ್ಚು ಸೇರುತ್ತಿದೆ. ಇದರಿಂದಾಗಿ ಈ ಪಾಚಿಗಳು ಹೇರಳವಾಗಿ ಬೆಳೆಯಲು ಕಾರಣವಾಗಿದೆ. ಇದು ಸಮುದ್ರದ ವಾತಾವರಕ್ಕೆ ಪೂರಕವಾಗಿಲ್ಲ. ಇದರ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲಾಗುತ್ತಿದೆ ಎನ್ನುತ್ತಾರೆ. ಕಳೆದ ಒಂದು ವರ್ಷಗಳಿಂದ ಜಿಲ್ಲೆಯ ಕರಾವಳಿ ಭಾಗದ ಸಮುದ್ರ ಭಾಗದಲ್ಲಿ ನೈಸರ್ಗಿಕ ಬದಲಾವಣೆ ಹೆಚ್ಚಾಗುತ್ತಿದೆ.

KWR FLASH SEA AV 1

TAGGED:karwarLightPublic TVseaWaveಅಲೆಕಾರವಾರಪಬ್ಲಿಕ್ ಟಿವಿಬೆಳಕುಸಮುದ್ರ
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
2 minutes ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
35 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
53 minutes ago
kea
Bengaluru City

UGCET | ಶುಲ್ಕ ಪಾವತಿಗೆ ಮಾ.7 ಕೊನೆ ದಿನ: ಕೆಇಎ

Public TV
By Public TV
1 hour ago
Nitish Kumar Bihar
Latest

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Public TV
By Public TV
1 hour ago
Sriramulu 1
Bengaluru City

ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ – ಶ್ರೀರಾಮುಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?