Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?

Bengaluru City

ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?

Public TV
Last updated: January 15, 2026 7:35 am
Public TV
Share
3 Min Read
Makar Sankranti 2026 Why did Bhishma leave his body on Uttarayana
SHARE

ಮಹಾಭಾರತ ಯುದ್ಧದ 10 ದಿನ ಶಿಖಂಡಿ ಮುಂದೆ ಸೋತ ಭೀಷ್ಮ (Bhishma) ಮರಣಶಯ್ಯೆಯಲ್ಲಿ ಮಲಗಿ 58 ದಿನದ ಬಳಿಕ ತನ್ನ ದೇಹವನ್ನು ತ್ಯಾಗ ಮಾಡುತ್ತಾನೆ. ತಂದೆ ಸಂತನು ಮಹಾರಾಜ ನೀಡಿದ ಇಚ್ಛಾ ಮರಣ (Iccha Mrityu) ವರದಿಂದ ಭೀಷ್ಮ ಶರದಲ್ಲಿ ಮಲಗಿ 58 ದಿನ ಕಳೆದಿದ್ದ.

ಭೀಷ್ಮ ಯಾವಾಗ ಬೇಕಾದರೂ ಪ್ರಾಣ ತ್ಯಾಗ ಮಾಡಬಹುದಿತ್ತು. ಆದರೆ 58ನೇ ದಿನಕ್ಕೆ ಪ್ರಾಣತ್ಯಾಗ ಮಾಡಿದ್ದು ಯಾಕೆ ಎನ್ನುವುದಕ್ಕೂ ಕಾರಣ ಇದೆ. ಹಿಂದೂ ಪಂಚಾಂಗದ ಪ್ರಕಾರ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯ ಪ್ರವೇಶಿಸುವ ಸಂಧಿಕಾಲಕ್ಕೆ ಸಂಕ್ರಮಣ ಅಥವಾ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಮೇಷಾದಿ ರಾಶಿಗಳಲ್ಲಿ ಸೂರ್ಯನ ಪರಿಭ್ರಮಣೆಯ ಚಲನೆಯನ್ನವಲಂಬಿಸಿ 12 ಮಾಸಗಳನ್ನಾಗಿ ವಿಂಗಡಿಸಲಾಗಿದೆ. ಧನು ಮಾಸ ಕೊನೆಯಾಗಿ ಸಂಕ್ರಮಣದಂದು ಮಕರ ಮಾಸಕ್ಕೆ ಸೂರ್ಯ ಪ್ರವೇಶಿಸುತ್ತಾನೆ. ಇಲ್ಲಿಯವರೆಗೆ ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಇಂದಿನಿಂದ ಉತ್ತರ ದಿಕ್ಕಿಗೆ ಚಲಿಸುತ್ತಾನೆ.

ಸೂರ್ಯನ ಚಲನೆಗೆ ಅನುಸಾರವಾಗಿ ಎರಡು ಆಯನಗಳಿವೆ. ಆಯನ ಎಂದರೆ ಚಲಿಸುವುದು ಎಂದರ್ಥ. ಸೂರ್ಯನು ಮಕರ ರಾಶಿಯಿಂದ ಮಿಥುನ ಮಾಸಾಂತ್ಯದವರೆಗೆ ಸಂಚರಿಸುವಾಗ ಉತ್ತರಾಯಣವಾಗುತ್ತದೆ. ಕರ್ಕಾಟಾದಿ ಧನುರಾಂತ್ಯದವರೆಗೆ ಸೂರ್ಯನು ಸಂಚರಿಸುವಾಗ ದಕ್ಷಿಣಾಯಣವಾಗುತ್ತದೆ. ಪ್ರತಿ ವರ್ಷ ಜನವರಿ 14 ಅಥವಾ 15 ರಿಂದ ಜುಲೈ 15ರವರೆಗಿನ ಅವಧಿಯನ್ನು ʼಉತ್ತರಾಯಣʼ ಹಾಗೂ ಜುಲೈ 16 ರಿಂದ ಜನವರಿ 14ರ ಅವಧಿಯನ್ನು ʼದಕ್ಷಿಣಾಯನʼ ಎಂದು ಕರೆಯಲಾಗುತ್ತದೆ. ಪುಷ್ಯಮಾಸದಲ್ಲಿಬರುವ(ಜನವರಿ 14 ಅಥವಾ 15) ಬರುವ ಸಂಕ್ರಮಣವನ್ನು (Makar Sankranti) ʼಉತ್ತರಾಯಣ ಪುಣ್ಯಕಾಲʼ ಎಂದು ಕರೆಯಲಾಗುತ್ತದೆ. ದೇವರ ಆರಾಧನೆ, ದಾನ, ಧರ್ಮ, ಮತ್ತು ವಿವಾಹಗಳಂತಹ ಕಾರ್ಯಗಳಿಗೆ ಮಂಗಳಕರ ಅವಧಿ ಎಂದು ಕರೆಯಲಾಗುತ್ತದೆ.  ಇದನ್ನೂ ಓದಿ:  ವರ್ಷದ ಮೊದಲ ಹಬ್ಬ; ವಿವಿಧ ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಆಚರಣೆ ಹೇಗೆ?

 

ಕೇವಲ ಬದುಕುಕುವುದಕ್ಕೆ ಮಾತ್ರವೇ ಅಲ್ಲ, ಸಾಯುವುದಕ್ಕೂ ಉತ್ತರಾಯಣ ಪುಣ್ಯಕಾಲ. ಉತ್ತರಾಯಣ ಪುಣ್ಯ ಕಾಲದಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂಬ ನಂಬಿಕೆಯಿದೆ. ಅದಕ್ಕಾಗಿಯೇ ಭೀಷ್ಮ ದೇಹ ತ್ಯಜಿಸಲು, ಉತ್ತರಾಯಣದ ಕಾಲದವರೆಗೂ, ಶರಶಯ್ಯೆಯಲ್ಲಿ ಹರಿಸ್ಮರಣೆ ಮಾಡುತ್ತಾ ಕಾದಿದ್ದ. ಉತ್ತರಾಯಣ, ದೇವತೆಗಳ ಕಾಲ, ದಕ್ಷಿಣಾಯನ ಪಿತೃಗಳ ಕಾಲವಾಗಿರುತ್ತದೆ. ಆದ್ದರಿಂದ ಯಜ್ಞ ಯಾಗಾದಿಗಳಿಗೆ, ಸಮಸ್ತ ದೇವತಾ ಕಾರ್ಯ ಶುಭಕಾರ್ಯಗಳಿಗೆ ಉತ್ತರಾಯಣ ಕಾಲ ಶ್ರೇಷ್ಠ ಕಾಲವೆಂದು ಕರೆಯಲಾಗುತ್ತದೆ.

ಭೀಷ್ಮ ಸೋತಿದ್ದು ಹೇಗೆ?
ಮಹಾಭಾರತ ಯುದ್ಧದಲ್ಲಿ ಭೀಷ್ಮ ಸಾವಿರಾರು ಸೈನಿಕರನ್ನು ಹತ್ಯೆ ಮಾಡುತ್ತಿದ್ದಾಗ ಕಂಗಾಲಾದ ಧರ್ಮರಾಯ 9ನೇ ದಿನದ ರಾತ್ರಿ ಅಜ್ಜನನ್ನು ಭೇಟಿಯಾಗುತ್ತಾನೆ. ಕೌರವ ಮಾಡುತ್ತಿರುವುದು ತಪ್ಪು, ಅಧರ್ಮ ಎನ್ನುವುದು ನಿಮಗೆ ತಿಳಿದಿದ್ದರೂ ನೀವು ಹೋರಾಟ ಮಾಡಿ ಸೈನಿಕರನ್ನು ಕೊಲ್ಲುತ್ತಿದ್ದೀರಿ ಇದು ಸರಿಯೇ ಎಂದು ಧರ್ಮದ ಬಗ್ಗೆ ಪ್ರಶ್ನೆ ಕೇಳುತ್ತೇನೆ. ಈ ಸಂದರ್ಭದಲ್ಲಿ ಭೀಷ್ಮ ತನ್ನ ಹಿಂದಿನ ಕಥೆಯನ್ನು ಹೇಳಿ ತಂದೆ ನೀಡಿದ ಇಚ್ಛಾಮರಣ ವರದ ಬಗ್ಗೆ ಹೇಳುತ್ತಾನೆ. ಅಷ್ಟೇ ಅಲ್ಲದೇ ಸ್ತ್ರೀಯಾಗಿ ಜನಿಸಿ ಪುರುಷನಾಗಿರುವ ವ್ಯಕ್ತಿ ಜೊತೆ ನಾನು ಯುದ್ಧ ಮಾಡುವುದಿಲ್ಲ. ಹೀಗಾಗಿ ನೀವು ಶಿಖಂಡಿಯನ್ನು ಮುಂದೆ ತಂದರೆ ನಾನು ಶಸ್ತ್ರತ್ಯಾಗ ಮಾಡುತ್ತೇನೆ ಎಂದು ಹೇಳುತ್ತಾನೆ. ಇದನ್ನೂ ಓದಿ: ಸಂಕ್ರಾಂತಿ ಭವಿಷ್ಯ – ಯಾವ ರಾಶಿಯವರಿಗೆ ಏನು?

ಈ ಶಿಖಂಡಿ ಯಾರು ಎನ್ನುವುಕ್ಕೂ ಕಥೆಯಿದೆ. ಹಿಂದಿನ ಜನ್ಮದಲ್ಲಿ ಅಂಬೆಯಾಗಿ ಜನಿಸಿದ್ದ ಈಕೆಯನ್ನು ಭೀಷ್ಮ ಸ್ವಯಂವರಲ್ಲಿ ಗೆದ್ದಿದ್ದ. ಆದರೆ ತಂದೆ ಸಂತನು ಮಹಾರಾಜನ ಮುಂದೆ ನಾನು ಬ್ರಹ್ಮಚಾರಿಯಾಗಿ ಇರುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದರಿಂದ ಈತ ಅಂಬೆಯನ್ನು ಮದುವೆಯಾಗಿರಲಿಲ್ಲ. ಮದುವೆಯಾಗದೇ ಮೋಸ ಮಾಡಿದ್ದಕ್ಕೆ ಅಂಬೆ ಮುಂದಿನ ಜನ್ಮದಲ್ಲಿ ಶಿಖಂಡಿಯಾಗಿ ಜನಿಸಿ ಭೀಷ್ಮನ ವಿರುದ್ಧ ಸೇಡು ತೀರಿಸುವ ಪ್ರತಿಜ್ಞೆ ಮಾಡಿದ್ದಳು. ಈ ವಿಚಾರ ಭೀಷ್ಮನಿಗೆ ತಿಳಿದ ಕಾರಣ ಆಕೆಯನ್ನು ಮುಂದೆ ತರುವಂತೆ ಹೇಳಿದ. 10ನೇ ದಿನದ ಯುದ್ಧದಲ್ಲಿ ಆಕೆ ಮುಂದೆ ಕಾಣಿಸುತ್ತಿದ್ದಂತೆ ಭೀಷ್ಮ ಶಸ್ತ್ರವನ್ನು ತ್ಯಾಗ ಮಾಡಿದ. ನಂತರ ಅರ್ಜುನನು ಶಿಖಂಡಿಯ ಹಿಂದೆ ನಿಂತು ಭೀಷ್ಮನ ಮೇಲೆ ಬಾಣಗಳ ಬಿಡುತ್ತಾನೆ. ಕೊನೆಗೆ ಅರ್ಜುನ ನಿರ್ಮಿಸಿದ ಶರದ ಹಾಸಿಗೆಯಲ್ಲಿ ಭೀಷ್ಮ ಮಲಗುತ್ತಾನೆ.

ಭೀಷ್ಮನು ಶರದ ಹಾಸಿಗೆಯ ಮೇಲೆ ಮಲಗಿದ್ದರೂ ಯುದ್ಧ 10 ದಿನಗಳ ಕಾಲ ಮುಂದುವರಿಯುತ್ತದೆ. ಈ ಸಂದರ್ಭದಲ್ಲಿ ಯುಧಿಷ್ಠಿರನಿಗೆ ರಾಜಧರ್ಮ, ಮೋಕ್ಷಧರ್ಮ ಮತ್ತು ಆಪದ್ಧರ್ಮ ಇತ್ಯಾದಿಗಳ ಅಮೂಲ್ಯವಾದ ಉಪದೇಶಗಳನ್ನು ನೀಡುತ್ತಾನೆ. ಈ ಉಪದೇಶವನ್ನು ಕೇಳಿದ್ದರಿಂದ ಯುಧಿಷ್ಠಿರನು ಅಪರಾಧ ಮತ್ತು ಪಶ್ಚಾತ್ತಾಪದಿಂದ ಮುಕ್ತನಾಗುತ್ತಾನೆ. ಭೀಷ್ಮನ ಈ ಬೋಧನೆಯನ್ನು ಈಗ ʼಭೀಷ್ಮ ನೀತಿʼ ಎಂದು ಕರೆಯಲಾಗುತ್ತದೆ. ಕೊನೆಗೆ ಸೂರ್ಯ ಉತ್ತರಾಯಣ ಪ್ರವೇಶಿಸಿದ ದಿನ ಭೀಷ್ಮ ದೇಹ ತ್ಯಾಗ ಮಾಡುತ್ತಾನೆ.

TAGGED:BheeshmaMahabharataMakar Sankrantiಭೀಷ್ಮಮಕರ ಸಂಕ್ರಾಂತಿಮಹಾಭಾರತ
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

dinner meeting congress mla 2
Bengaluru City

ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

Public TV
By Public TV
3 hours ago
Davanagere by election Muslim leaders challenge Congress to defeat Shamanur family by 50000 votes if given ticket
Davanagere

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

Public TV
By Public TV
3 hours ago
Sandesh PG
Dakshina Kannada

ಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ –  ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್

Public TV
By Public TV
3 hours ago
vyalikaval parcel
Bengaluru City

ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ – ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ

Public TV
By Public TV
4 hours ago
Gadag Farmer Death
Districts

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Public TV
By Public TV
5 hours ago
bengaluru hubballi karave protest for kannada railway exam postponed
Bengaluru City

ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?