Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಟ ಪಟ ಹಾರೋ ಗಾಳಿಪಟ… ಮಕರ ಸಂಕ್ರಾಂತಿಗೆ ಪಟ ಹಾರಿಸೋದೇಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಟ ಪಟ ಹಾರೋ ಗಾಳಿಪಟ… ಮಕರ ಸಂಕ್ರಾಂತಿಗೆ ಪಟ ಹಾರಿಸೋದೇಕೆ?

Latest

ಪಟ ಪಟ ಹಾರೋ ಗಾಳಿಪಟ… ಮಕರ ಸಂಕ್ರಾಂತಿಗೆ ಪಟ ಹಾರಿಸೋದೇಕೆ?

Public TV
Last updated: January 13, 2026 4:23 pm
Public TV
Share
2 Min Read
WhatsApp Image 2026 01 13 at 4.16.37 PM
SHARE

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ. ಈ ಸಂಕ್ರಾಂತಿ ಸಂಭ್ರಮದ ದಿನ ಗಾಳಿಪಟ ಹಾರಿಸುವುದು ಒಂದು ಸಂಪ್ರದಾಯವಾಗಿದೆ. ಆದರೆ ಸಂಕ್ರಾಂತಿ ಹಬ್ಬದಂದು ಗಾಳಿಪಟ ಯಾಕೆ ಹಾರಿಸುತ್ತಾರೆ ಎನ್ನುವ ಬಗ್ಗೆ ಹಲವರಿಗೆ ಗೊತ್ತಿರಲ್ಲ. ಸಂಕ್ರಾಂತಿಯಂದು ಗಾಳಿಪಟ ಯಾಕೆ ಹಾರಿಸುತ್ತಾರೆ? ಏನಿದರ ವಿಶೇಷತೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ.

Ellu Bella Makar Sankranti 2

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ.

ಗಾಳಿಪಟವನ್ನು ಏಕೆ ಹಾರಿಸುತ್ತಾರೆ?
ಸಂಕ್ರಾಂತಿಯ ಹಬ್ಬದ ದಿನ ವರ್ಣ ರಂಜಿತ ಗಾಳಿಪಟಗಳನ್ನು ಆಗಸದಲ್ಲಿ ಹಾರಿಸಿ ಜನರು ಖುಷಿಪಡುತ್ತಾರೆ. ಈ ಸಂಭ್ರಮ ಉತ್ತರಾಯಣದಾದ್ಯಂತ ಮುಂದುವರಿಯುತ್ತದೆ. ಸಂಕ್ರಾಂತಿ ಒಂದೆಡೆ ಸುಗ್ಗಿಯ ಋತುವಿನ ಆಗಮನವನ್ನು ಸೂಚಿಸುವ ಹಬ್ಬವಾದರೆ, ಇನ್ನೊಂದೆಡೆ ಚಳಿಗಾಲದ ಅಂತ್ಯವನ್ನು ಸಾಂಕೇತಿಕವಾಗಿ ತೋರುವ ದಿನ ಎನ್ನಲಾಗುತ್ತೆ.

Photo credit Ocean Shores Kites

ಆರೋಗ್ಯ ಪ್ರಯೋಜನವೂ ಇದೆಯೇ?
ಚಳಿಗಾಲದಲ್ಲಿ ಸಾಕಷ್ಟು ಉತ್ಪತ್ತಿಯಾಗುವ ಕಾರಣಕ್ಕೆ ಮನುಷ್ಯ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಮಕರ ಸಂಕ್ರಾಂತಿಯ ಸಮಯದಲ್ಲಿ ಮುಂಜಾನೆ ಸೂರ್ಯನ ಕಿರಣಗಳು ದೇಹದ ಮೇಲೆ ಬೀಳುವುದರಿಂದ ಬ್ಯಾಕ್ಟೀರಿಯಾಗಳು ನೈಸರ್ಗಿಕವಾಗಿ ನಾಶವಾಗುತ್ತವೆ. ಜೊತೆಗೆ ದೇಹಕ್ಕೆ ವಿಟಮಿನ್ ಡಿ ದೊರಕುತ್ತದೆ. ಇದು ಚರ್ಮದ ಸಮಸ್ಯೆ ನಿವಾರಣೆಗೆ ಉತ್ತಮ ಪರಿಣಾಮ ಬೀರುತ್ತದೆ. ಈ ಕಾರಣಕ್ಕೆ ಸಂಕ್ರಾಂತಿಯ ದಿನ ಹಾಗೂ ಉತ್ತರಾಯಣ ಋತುವಿನ ಕಾಲದಲ್ಲಿ ಹೆಚ್ಚಾಗಿ ಗಾಳಿಪಟವನ್ನು ಹಾರಿಸಲಾಗುತ್ತದೆ.

ಸ್ವರ್ಗಕ್ಕೆ ಹಾರುವ ಗಾಳಿಪಟ
ಇನ್ನೊಂದು ನಂಬಿಕೆಯ ಪ್ರಕಾರ, ಸಂಕ್ರಾಂತಿ ಮತ್ತು ಉತ್ತರಾಯಣದ ಸಂದರ್ಭದಲ್ಲಿ ಗಾಳಿಪಟ ಹಾರಿಸಿದರೆ ಅವುಗಳು ಸ್ವರ್ಗಕ್ಕೆ ಹಾರಿಹೋಗುತ್ತವೆ ಎನ್ನುವ ನಂಬಿಕೆಯಿದೆ. ಉತ್ತಮ ಪೈರು ಹಾಗೂ ಜೀವನದಲ್ಲಿ ಖುಷಿ ನೀಡಿದ್ದಕ್ಕೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಸಂಕ್ರಾಂತಿಯಂದು ಗಾಳಿಪಟವನ್ನು ಹಾರಿಸುತ್ತಾರೆ ಎನ್ನುವ ಮಾತಿದೆ. ಅಲ್ಲದೆ ಉತ್ತರಾಯಣದ ಸಮಯದಲ್ಲಿ ನೀಲಿ ಬಾನಂಗಳ ಗಾಳಿಪಟ ಹಾರಿಸಲು ಸಜ್ಜಾದಂತೆ ಇರುತ್ತದೆ. ಅದು ಗಾಳಿಪಟಗಳನ್ನು ಹಾರಿಸಲು ಸೂಕ್ತ ಸಮಯವಾಗಿರುತ್ತದೆ. ಜೊತೆಗೆ ಬಾನಂಗಳದಲ್ಲಿ ಗಾಳಿಪಟದ ಬಣ್ಣದ ಚಿತ್ತಾರದ ಸುಂದರ ನೋಟ ಕಣ್ಣಿಗೆ ಆನಂದ ನೀಡುತ್ತದೆ. ಆದ್ದರಿಂದ ಗಾಳಿಪಟ ಹಾರಿಸಲಾಗುತ್ತದೆ ಎನ್ನಲಾಗುತ್ತೆ.

ಗಾಳಿಪಟ ಸ್ಪರ್ಧೆ
ಭಾರತದ ಬಹುತೇಕ ಭಾಗಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಸಾಂಪ್ರದಾಯಿಕ ಹಿನ್ನೆಲೆಯಲ್ಲಿ ಗಾಳಿಪಟ ಹಾರಿಸುವ ಪ್ರತೀತಿ ಕೂಡ ಭಾರತದಲ್ಲಿದೆ. ಈ ಸಂಪ್ರದಾಯ ಹಾಗೂ ರೂಢಿಯನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಹೀಗಾಗೆ ಹಲವೆಡೆ ಗಾಳಿಪಟ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗುತ್ತದೆ. ಅದರಲ್ಲೂ ಗುಜರಾತ್‍ನಲ್ಲಿ ಗಾಳಿಪಟ ಹಾರಿಸುವ ದೊಡ್ಡ ಸ್ಪರ್ಧೆಯೇ ನಡೆಯುತ್ತದೆ. ಈ ಸ್ಪರ್ಧೆಯಲ್ಲಿ ಹಲವು ರಾಜ್ಯಗಳ ಜನರು ಭಾಗವಹಿಸುತ್ತಾರೆ. ಈ ಸುಂದರ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಕೇವಲ ದೇಶವಾಸಿಗಳಷ್ಟೇ ಅಲ್ಲದೆ ವಿದೇಶದಿಂದಲೂ ಪ್ರವಾಸಿಗರು ಕಣ್ತುಂಬಿಕೊಳ್ತಾರೆ.

TAGGED:festivalKite FlyingMakar Sankranti
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Iran Foreign Minister Abbas Araghchi
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವಂತೆ ಅಮೆರಿಕ ಭಾರತದ ಜೊತೆ ಬೇಡಿಕೊಂಡಿದೆ: ಇರಾನ್‌

Public TV
By Public TV
49 minutes ago
Chitradurga Fake Sign Fraud
Chitradurga

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Public TV
By Public TV
1 hour ago
Online Gas Booking
Bengaluru City

ಆನ್‌ಲೈನ್ ಗ್ಯಾಸ್ ಬುಕ್ಕಿಂಗ್‌ಗೂ ಮುನ್ನ ಎಚ್ಚರ – ಏಜೆನ್ಸಿಗಳ ಹೆಸರಲ್ಲಿ ವಂಚನೆ

Public TV
By Public TV
2 hours ago
Kharg Island
Latest

ಮಧ್ಯಪ್ರಾಚ್ಯದ ಇತಿಹಾಸದಲ್ಲಿ ಭೀಕರ ದಾಳಿ – ಇರಾನಿನ ಕಿರೀಟ ಖಾರ್ಗ್ ದ್ವೀಪಕ್ಕೆ ಬಾಂಬ್‌

Public TV
By Public TV
2 hours ago
Mojtaba Khamenei 1 1
Latest

ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ತಲೆಗೆ 92.47 ಕೋಟಿ ಬಹುಮಾನ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 14-03-2026

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?