Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂಕ್ರಾಂತಿ ಸುಗ್ಗಿ; ಹಸುಗಳಿಗೆ ಕಿಚ್ಚು ಹಾಯಿಸುವ ಸಂಭ್ರಮ

Public TV
Last updated: January 14, 2025 8:41 am
Public TV
Share
3 Min Read
makar sankranti cow
SHARE

ಮಕರ ಸಂಕ್ರಾಂತಿ (Makar Sankranti) ಎಂದೊಡನೆ ಥಟ್ಟನೆ ನೆನಪಾಗುವುದು ಹಸುಗಳಿಗೆ ಕಿಚ್ಚು ಹಾಯಿಸುವುದು. ಹಳೆ ಮೈಸೂರು ಭಾಗದಲ್ಲಿ ಈ ಪದ್ಧತಿ ಹೆಚ್ಚು ಜನಜನಿತ. ಮಾಗಿಯ ಚಳಿಯಲ್ಲಿ ಮುಂಜಾನೆಯೇ ಎದ್ದು ಹಸು-ಕುರಿ-ಮೇಕೆಗಳನ್ನು ಜನರು ಕಾಲುವೆ, ಕರೆ-ಕಟ್ಟೆ, ಅಥವಾ ನದಿಗಳ ಕಡೆಗೆ ಅಟ್ಟಿಕೊಂಡು ಹೋಗುತ್ತಾರೆ. ಅಲ್ಲಿ ಅವುಗಳ ಮೈ ಉಜ್ಜಿ ಚೆನ್ನಾಗಿ ಸ್ನಾನ ಮಾಡಿಸಿ ಮನೆಗೆ ತಂದು ಕಟ್ಟುತ್ತಾರೆ. ಬಣ್ಣಗಳಿಂದ ರಾಸುಗಳ ಮೈ-ಕೊಂಬುಗಳಲ್ಲಿ ಚಿತ್ತಾರ ಮೂಡಿಸುತ್ತಾರೆ. ಕೊಂಬುಗಳಿಗೆ ಬಲೂನು ಕಟ್ಟಿ ಸಿಂಗರಿಸುತ್ತಾರೆ. ಕೊನೆಗೆ ಹಸುಗಳನ್ನು ಕಿಚ್ಚು ಹಾಯಿಸುವುದಕ್ಕೆ ಅಣಿಗೊಳಿಸುತ್ತಾರೆ.

ಇತ್ತ ಹೆಂಗಸರು ಮನೆಗಳನ್ನು ಸ್ವಚ್ಛಗೊಳಿಸಿ ದೇವರ ಕೋಣೆಗಳನ್ನು ಅಲಂಕರಿಸುತ್ತಾರೆ. ಹೊಸ ಬಟ್ಟೆ ಧರಿಸಿ ಪೂಜೆಗೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಜೊತೆಗೆ ಬಗೆಬಗೆಯ ವಿಶೇಷ ಭಕ್ಷ್ಯಗಳನ್ನು ಸಿದ್ಧಪಡಿಸುತ್ತಾರೆ. ಮನೆಯ ಮಕ್ಕಳು ಸಹ ಉತ್ಸಾಹದಿಂದ ಸಿದ್ಧತೆ ಕಾರ್ಯಗಳಲ್ಲಿ ಭಾಗವಹಿಸುತ್ತಾರೆ. ಇದನ್ನೂ ಓದಿ: ಇಂದಿನಿಂದ ಉತ್ತರಾಯಣ ಆರಂಭ – ಶುಭ ಕಾರ್ಯಕ್ಕೆ ಮಂಗಳಕರ ಅವಧಿ ಯಾಕೆ?

sankranti bull

ಸಂಜೆಯಾಗುತ್ತಿದ್ದಂತೆ ಹಳ್ಳಿಗಳಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿರುತ್ತದೆ. ಊರಿನ ಸಿಂಗರಿಸಿದ ಹಸುಗಳನ್ನು ಒಂದು ಕಡೆ ಕಿಚ್ಚು ಹಾಯಿಸಲು ಕರೆತರಲಾಗುತ್ತದೆ. ನೆಲಕ್ಕೆ ಹುಲ್ಲನ್ನು ಹಾಕಿ ಬೆಂಕಿ ಹಚ್ಚಿ, ಹಸುಗಳಿಗೆ ಕಿಚ್ಚು ಹಾಯಿಸಲಾಗುತ್ತದೆ. ಬೆಚ್ಚುವ ಹಸುಗಳನ್ನು ಹುರಿದುಂಬಿಸುತ್ತಾ ಬೆಂಕಿಯಿಂದ ಜಿಗಿಸುವ ದೃಶ್ಯ ರಂಜನೀಯವಾಗಿರುತ್ತದೆ. ಆ ದೃಶ್ಯವನ್ನು ಕಣ್ತುಂಬಿಕೊಂಡು ಆನಂದಿಸಲು ಇಡೀ ಊರಿಗೆ ಊರೇ ನೆರೆದಿರುತ್ತದೆ.

ಚಳಿಗಾಲ ಎಂದರೆ ಸೋಂಕು, ಕಾಯಿಲೆಗಳ ಕಾಲ. ಹಿಂದೆಲ್ಲ ಹಸುಗಳೇ ವಿವಿಧ ಕಾಯಿಲೆಗಳಿಗೆ ತುತ್ತಾಗುತ್ತಿದ್ದವು. ಹಬ್ಬದ ಸಂದರ್ಭದಲ್ಲಿ ಅವುಗಳನ್ನು ಚೆನ್ನಾಗಿ ತೊಳೆದು ಮೈ ತುಂಬೆಲ್ಲಾ ಅರಿಸಿನ ಹಚ್ಚುವುದರಿಂದ, ಸೋಂಕಿಗೆ ತುತ್ತಾಗುವುದನ್ನು ತಡೆಯಬಹುದು. ಕಿಚ್ಚು ಹಾಯುವಾಗ ಹಸುಗಳ ಮೈಗೆ ಬೆಂಕಿಯ ಹವೆ ತಾಕಿ ಕ್ರಿಮಿಗಳು ನಾಶವಾಗುತ್ತವೆ. ಕಿಚ್ಚು ಹಾಯುವುದರಿಂದ ಚಳಿಯಲ್ಲಿ ಹಸುಗಳಿಗೆ ಬೆಚ್ಚನೆಯ ಅನುಭವವಾಗಿ ಮೈಕೊಡವಿ ನಿಲ್ಲಲು ಸಾಧ್ಯವಾಗುತ್ತದೆ. ಇದನ್ನೂ ಓದಿ: ಬೇರೆ ಬೇರೆ ರಾಜ್ಯಗಳಲ್ಲಿ ಸಂಕ್ರಾಂತಿ ಆಚರಣೆ ಹೇಗೆ?

Ellu Bella Makar Sankranti 2

ಹಸುಗಳಿಗೆ ಕಿಚ್ಚು ಹಾಯಿಸಿದ ಬಳಿಕ ಬೆಂಕಿಯಿಂದಾದ ಬೂದಿಯನ್ನು ತೆಗೆದುಕೊಂಡು ಜನರು ಭಕ್ತಿ-ಭಾವದಿಂದ ಹಣೆಗೆ ತಿಲಕ ಇಟ್ಟುಕೊಳ್ಳುತ್ತಾರೆ. ಕಿಚ್ಚು ಹಾಯ್ದ ಗೋವುಗಳನ್ನು ಮನೆಗೆ ಕರೆತಂದು ಅವುಗಳ ಕಾಲು ತೊಳೆದು ಹೆಂಗಳೆಯರು ಗೋಪೂಜೆ ಮಾಡುತ್ತಾರೆ. ಮನೆಯಲ್ಲಿ ತಯಾರಿಸಿದ ಭಕ್ಷ್ಯ ಮತ್ತು ಬಾಳೆ ಹಣ್ಣನ್ನು ಮೊದಲು ಗೋವಿಗೆ ತಿನ್ನಿಸುತ್ತಾರೆ. ಗೋವು ತಿಂದು ಉಳಿಸಿದ್ದನ್ನು ಪ್ರಸಾದವೆಂದು ಭಕ್ತಿಯಿಂದ ಮನೆಮಂದಿ ಸೇವಿಸುತ್ತಾರೆ. ಕೊನೆಗೆ ಮನೆಯಲ್ಲಿ ಎಲ್ಲರೂ ಒಟ್ಟಿಗೆ ಕುಳಿತು ಹಬ್ಬದೂಟ ಸವಿದು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿ ಆನಂದಿಸುತ್ತಾರೆ.

ಎಳ್ಳು-ಬೆಲ್ಲ: ಸಂಕ್ರಾಂತಿಯ ಸಾಂಪ್ರದಾಯಿಕ ತಿನಿಸು ಇದು. ‘ಎಳ್ಳು-ಬೆಲ್ಲ ತಿಂದು ಒಳ್ಳೆ ಮಾತಾಡು’ ಅಂತಾರೆ. ಚಳಿಗಾಲದಲ್ಲಿ ಮನುಷ್ಯನ ದೇಹದಲ್ಲಿ ನೀರಿನಾಂಶ ಕಡಿಮೆಯಾಗಿ ಮೈ ಚರ್ಮ ಒಡೆಯುತ್ತದೆ. ಇಂತಹ ಸಂದರ್ಭದಲ್ಲಿ ಎಣ್ಣೆ ಅಂಶವಿರುವ ಪದಾರ್ಥ ಸೇವನೆ ದೇಹಕ್ಕೆ ತುಂಬಾ ಸಹಕಾರಿ. ಈ ಹಿನ್ನೆಲೆಯಲ್ಲಿ ಎಳ್ಳು ದೇಹಕ್ಕೆ ಅಗತ್ಯ ಎಣ್ಣೆಯಂಶವನ್ನು ನೀಡುತ್ತದೆ. ಇದನ್ನೂ ಓದಿ: ಮಕರ ಸಂಕ್ರಾಂತಿಗೆ ಮನೆಯಲ್ಲೇ ತಯಾರಿಸಿ ಎಳ್ಳು-ಬೆಲ್ಲ

Kichadi

ಕಿಚಡಿ-ಕಾಯಾಲು ಭಕ್ಷ್ಯದ ಗಮ್ಮತ್ತು: ಸಂಕ್ರಾಂತಿ ಹಬ್ಬದಂದು ಹೆಚ್ಚು ಪ್ರಚಲಿತದಲ್ಲಿರುವ ಭಕ್ಷ್ಯವೆಂದರೆ ಅದು ಕಿಚಡಿ-ಕಾಯಾಲು. ಅರಿಸಿನ, ಮೆಣಸು, ಜೀರಿಗೆ ಬಳಸಿ ಕಿಚಡಿ ತಯಾರಿಸಲಾಗುತ್ತದೆ. ಅದಕ್ಕೆ ಹೊಂದುವ ಸಿಹಿಯಾದ ಕಾಯಾಲನ್ನು ತೆಂಗಿನಕಾಯಿ, ಬೆಲ್ಲ ಬಳಸಿ ಮಾಡಲಾಗುತ್ತದೆ. ಚಳಿಗಾಲದಲ್ಲಿ ಈ ಭಕ್ಷ್ಯವು ರೋಗನಿರೋಧಕ ಶಕ್ತಿಯನ್ನು ಒದಗಿಸುತ್ತದೆ. ಅರಿಸಿನ ಮತ್ತು ಮೆಣಸು ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾದ ಪದಾರ್ಥಗಳು.

ಅವರೆಕಾಳು ಪಲ್ಯ, ಸಾಂಬಾರ್: ಈ ಸೀಸನ್‌ನಲ್ಲಿ ಜನಪ್ರಿಯ ಬೆಳೆ ಎಂದರೆ ಅದು ಅವರೆಕಾಳು. ಚಳಿಗಾಲದಲ್ಲಿ ಅವರೆಕಾಳು ಬಳಸಿ ವಿವಿಧ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಹಬ್ಬದ ದಿನ ಅವರೆಕಾಳು ಪಲ್ಯ, ಸಾಂಬಾರ್ ಮಾಡಿ ಜನ ಬಾಯಿ ಚಪ್ಪರಿಸಿ ಸವಿಯುವುದುಂಟು. ಇದನ್ನೂ ಓದಿ: Sankranti 2025: ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸುವುದೇಕೆ? – ಈ ಕೌತುಕ ನೀವು ತಿಳಿಯಲೇಬೇಕು

TAGGED:Bull FirecowMakar SankrantiSankranti festivalಕಿಚ್ಚು ಹಾಯಿಸುವುದುಮಕರ ಸಂಕ್ರಾಂತಿಹಸುಗಳು
Share This Article
Facebook Whatsapp Whatsapp Telegram

You Might Also Like

HK Patil
Bengaluru City

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ್‌ ನೇಮಕ

Public TV
By Public TV
3 hours ago
chinnaswamy stadium
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಪವರ್ ಕಟ್ ಮಾಡಿದ ಬೆಸ್ಕಾಂ

Public TV
By Public TV
4 hours ago
Himachal Pradesh 1
Latest

ಹಿಮಾಚಲ ಪ್ರದೇಶದಲ್ಲಿ ಮಳೆಯ ಅವಾಂತರ – 18 ಸ್ಥಳಗಳಲ್ಲಿ ಭೂಕುಸಿತದ ಆತಂಕ, 259 ಪ್ರಮುಖ ರಸ್ತೆಗಳು ಬಂದ್‌

Public TV
By Public TV
4 hours ago
Kolkata College Students Rape Its Video Recording Was Planned By Accused
Crime

ಕೋಲ್ಕತ್ತಾ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಪ್ಲ್ಯಾನ್‌ ಮಾಡಿದ್ದ ಆರೋಪಿಗಳು

Public TV
By Public TV
4 hours ago
Arun Badiger
Districts

ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ

Public TV
By Public TV
5 hours ago
kea
Bengaluru City

UGCET – ಜು.1 ರಿಂದ ಆನ್‍ಲೈನ್ ಮೂಲಕ ತಿದ್ದುಪಡಿಗೆ ಕೊನೆ ಅವಕಾಶ ನೀಡಿದ ಕೆಇಎ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?