Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?

Bengaluru City

ಸಂಕ್ರಾಂತಿ ಯಾಕೆ ಮಾಡ್ತಾರೆ? ಈ ದಿನ ಎಳ್ಳಿಗೆ ಮಹತ್ವ ಯಾಕೆ?

Public TV
Last updated: January 13, 2020 6:39 am
Public TV
Share
3 Min Read
sankranti images 2
SHARE

ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ.

ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು ನಂಬಿದ್ದಾರೆ. ಇದನ್ನೂ ಓದಿ: ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸೋದೇಕೆ? ವಿಶೇಷತೆ ಏನು?

sankranti ellu 2

ಮೊದಲು ದಕ್ಷಿಣದತ್ತ ವಾಲಿ ಚಲಿಸುತ್ತಿದ್ದ ಸೂರ್ಯ, ಸಂಕ್ರಮಣ ದಿನದಿಂದ ಉತ್ತರ ದಿಕ್ಕಿಗೆ ತಿರುಗಿ ಚಲಿಸುತ್ತಾನೆ. ಆಯನ ಎಂದರೆ ಚಲಿಸುವುದು, ಆದರಿಂದ ಉತ್ತರಾಯಣ, ದಕ್ಷಿಣಾಯನ ಎಂದು ಹೆಸರು ಸೃಷ್ಟಿಯಾಗಿದ್ದು. ಹೀಗೆ ಸೂರ್ಯ ಪಥ ಬದಲಾಗುವುದರಿಂದ ನಮ್ಮ ದೇಶದಲ್ಲಿ ಈ ಸಮಯಕ್ಕೆ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ. ಇದನ್ನೂ ಓದಿ: ಸಂಕ್ರಾಂತಿಗೆ ಚಟಾಪಟ್ ಅಂತಾ ಮಾಡಿ ಸಕ್ಕರೆ ಅಚ್ಚು

ಎಲ್ಲಿ ಹೇಗೆ ಹಬ್ಬ ಆಚರಣೆ?
ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದರೆ, ನೆರೆಯ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಭೋಗಿ, ಕನುಹಬ್ಬ ಎಂದು ಮೂರುದಿನಗಳ ಕಾಲ ಈ ಹಬ್ಬವನ್ನು ಆಚರಿಸುತ್ತಾರೆ. ಮಕರ ಸಂಕ್ರಾಂತಿಯೂ ಸುಗ್ಗಿಯನ್ನು ಸಾರುವ ಹಬ್ಬವಾಗಿದ್ದು, ದ್ರಾವಿಡ ಸಂಪ್ರದಾಯವನ್ನು ಪಾಲಿಸುವವರಿಗೆ ಇದೊಂದು ವಿಶೇಷ ಸಂಭ್ರಮದ ದಿನವಾಗಿರುತ್ತದೆ. ಇದನ್ನೂ ಓದಿ: ಸಂಕ್ರಾಂತಿಗೆ ನಿಮ್ಮ ಮನೆಯಲ್ಲಿರಲಿ ಅವಲಕ್ಕಿ ಸಿಹಿ ಪೊಂಗಲ್

sankranti images 1

ಸಂಕ್ರಾಂತಿ ದಿನದಂದು ವಿವಾಹಿತ ಹಾಗೂ ಅವಿವಾಹಿತ ಹೆಣ್ಣುಮಕ್ಕಳು ಎಳ್ಳು-ಬೆಲ್ಲ, ಕೊಬ್ಬರಿ, ನೆಲಗಡಲೆ, ಕಬ್ಬು ಬಾಳೆಹಣ್ಣು, ಸಕ್ಕರೆ ಅಚ್ಚು ಇತ್ಯಾದಿಗಳನ್ನು ಎಲ್ಲರಿಗೂ ಹಂಚಿ ಸಂಭ್ರಮಿಸುತ್ತಾರೆ. ಆಂಧ್ರದಲ್ಲಿ ಈ ದಿನದಂದು ಶ್ರೀರಾಮನ ಪೂಜೆ ಮಾಡಿ, ರೈತರು ಜಾನುವಾರುಗಳಿಗೆ ಮೈತೊಳೆದು, ಅದನ್ನು ಸಿಂಗರಿಸಿ ಮೆರವಣಿಗೆ ಮಾಡುತ್ತಾರೆ. ಅದರಲ್ಲೂ ಸಂಕ್ರಮಣದ ದಿನದ ಸಂಜೆ ಎತ್ತುಗಳಿಗೆ ಕಿಚ್ಚು ಹಾಯಿಸುವುದು ಈ ಹಬ್ಬದ ವಿಶೇಷ.

ಎಳ್ಳಿಗೆ ಮಹತ್ವ ಯಾಕೆ?
ಸಂಕ್ರಾಂತಿ ದಿನದಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ ಎಳ್ಳುದಾನ ಕೊಟ್ಟರೆ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆಯಿದೆ. ಹಾಗೆಯೇ ದೇವಾಲಯಗಳಲ್ಲಿ ಎಳ್ಳೆಣ್ಣೆ ಹಾಕಿ ದೀಪ ಬೆಳಗಬೇಕು. ಈ ದಿನ ನಾವು ಮಾಡಿದ ದಾನ ಧರ್ಮಗಳ ಪುಣ್ಯವು ಜನ್ಮ ಜನ್ಮದಲ್ಲೂ ಸದಾ ನಮಗೆ ಶ್ರೇಯಸ್ಸು ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ ಎಂದು ಹಿರಿಯರು ಹೇಳುತ್ತಾರೆ. `ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡು’ ಎಂಬ ಕನ್ನಡದ ಗಾದೆಗೆ ಸಂಕ್ರಾಂತಿ ಹಬ್ಬವೇ ಮೂಲವಾಗಿರುವುದು ಎಂದು ಹಲವರು ಹೇಳುತ್ತಾರೆ.

sankranti ellu 1

ಮಕರ ಸಂಕ್ರಾಂತಿಯ ಇನ್ನೊಂದು ಹೆಸರು ಉತ್ತರಾಯಣ ಪುಣ್ಯಕಾಲ. ಇಡೀ ಉತ್ತರಾಯಣವೇ ದೇವತೆಗಳಿಗೆ ಪ್ರಿಯವಾದದ್ದು. ದೇವಕಾರ್ಯ, ಶುಭ ಕಾರ್ಯಗಳಿಗೆ ಈ ದಿನ ಬಹಳ ಪ್ರಾಶಸ್ತ್ಯವಾಗಿದೆ. ಇಂತಹ ಉತ್ತರಾಯಣವನ್ನು ಪ್ರಾರಂಭಿಸುವ ದಿನವಾದ ಮಕರ ಸಂಕ್ರಾಂತಿಗೆ ವಿಶೇಷವಾದ ಮಾನ್ಯತೆಯಿದೆ. ಈ ದಿನ ಶ್ರದ್ಧಾಭಕ್ತಿಯಿಂದ ಮಾಡುವ ಸ್ನಾನ, ಧ್ಯಾನ, ದಾನ, ಹೋಮ, ಪೂಜೆ, ತರ್ಪಣ, ಶ್ರಾದ್ಧ ಮುಂತಾದುವುಗಳಿಗೆ ವಿಶೇಷವಾದ ಫಲ ಸಿಗುತ್ತದೆ ಎನ್ನುವ ವಿಚಾರ ಹಲವು ಶಾಸ್ತ್ರಗಳಲ್ಲಿ ಉಲ್ಲೇಖವಾಗಿದೆ.

sankranti image

ಸಂಕ್ರಾಂತಿಯು ಸೌರಮಾನದ ಹಬ್ಬ. ಮಕರ ಮಾಸದದಲ್ಲಿ ಮಾಡುವ ಮಕರ ಸಂಕ್ರಮಣ ಆಚರಣೆ, ಚಾಂದ್ರಮಾನದಂತೆ ಪುಷ್ಪಮಾಸದಲ್ಲಿ ಇದು ಬರುತ್ತದೆ. ಎಳ್ಳಿನ ಹಬ್ಬ ಎಂದೇ ಪ್ರಸಿದ್ಧಿಯಾಗಿರುವ ಸಂಕ್ರಮಣ ಹಬ್ಬದಲ್ಲಿ ಎಳ್ಳನ್ನು ನಾನಾ ರೂಪದಲ್ಲಿ ಬಳಸುತ್ತಾರೆ. ಕೆಲವರು ಎಳ್ಳಿನಿಂದ ಸ್ನಾನ ಮಾಡುತ್ತಾರೆ. ಎಳ್ಳಿನ ನೀರಿನಿಂದ ತರ್ಪಣ ಕೊಡುತ್ತಾರೆ, ಎಳ್ಳಿನಿಂದ ಮಾಡಿದ ಗೋವನ್ನು ದಾನ ಮಾಡುತ್ತಾರೆ. ಮಕ್ಕಳಿಗೆ ಆರತಿ ಎತ್ತಿ, ಗುರು ಹಿರಿಯರಿಗೆ ನಮಸ್ಕಾರ ಮಾಡಿ ಆರ್ಶಿವಾದ ಪಡೆಯುವುದು ಸಂಕ್ರಾತಿ ಹಬ್ಬದ ಒಂದು ವಿಶೇಷ ಪದ್ಧತಿ.

sankranti ellu

ಮಕರ ಸಂಕ್ರಾಂತಿಯ ದಿನದಂದು ದೇವತೆಗಳಿಗೆ ಹಗಲು ಹಾಗೂ ರಾಕ್ಷಸರಿಗೆ ರಾತ್ರಿ ಆಗುವುದೆಂದು ಪುರಾಣದಲ್ಲಿ ಹೇಳಿದ್ದಾರೆ. ಈ ಆನಂದಕ್ಕಾಗಿ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡೋಣವೆಂದು ಎಲ್ಲರು ಎಳ್ಳು ಬೆಲ್ಲವನ್ನು ಹಂಚುತ್ತಾರೆ. ಉತ್ತರ ಭಾರತದಲ್ಲಿಯೂ ಸಂಕ್ರಮಣ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಅಲಹಾಬಾದ್‍ನಲ್ಲಿ ಈ ವೇಳೆ ಸುಪ್ರಸಿದ್ಧವಾದ ಕುಂಭಮೇಳ ಕೂಡ ನಡೆಯುತ್ತದೆ.

TAGGED:ellu bellaKumba melaMakara SankrantiPublic TVಎಳ್ಳಿನ ಹಬ್ಬಎಳ್ಳು ಬೆಲ್ಲಕುಂಭ ಮೇಳಮಕರ ಸಂಕ್ರಾಂತಿಸಂಕ್ರಾಂತಿ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
2 minutes ago
bagalakote arrest
Bagalkot

ಬಾಗಲಕೋಟೆ| ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ

Public TV
By Public TV
5 minutes ago
Siddaramaiah 4
Bengaluru City

ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ – ಸಿಎಂ ಹೇಳಿಕೆಗೆ ಸದನದಲ್ಲಿ ಕೋಲಾಹಲ

Public TV
By Public TV
24 minutes ago
Anant Singh Bihar
Latest

ಜೈಲಿನಿಂದ ಬಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಸಿಂಗ್

Public TV
By Public TV
34 minutes ago
Crop Relief
Chitradurga

ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ

Public TV
By Public TV
1 hour ago
siddapur murder case
Crime

ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್‌ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?