Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ಅವಧಿ ಮೀರಿ ವಾಸಗೃಹದಿಂದ ಕುಟುಂಬ ಹೊರಹಾಕಿದ್ದ ಪ್ರಕರಣ ಸುಖಾಂತ್ಯ – ಮೃತ ನೌಕರನ ಪುತ್ರನಿಗೆ ಗುತ್ತಿಗೆ ನೌಕರಿ

Public TV
Last updated: January 23, 2022 7:53 pm
Public TV
Share
2 Min Read
Malai Mahadeshwara Swamy Contractor
SHARE

ಚಾಮರಾಜನಗರ: ಅವಧಿ ಮೀರಿ ವಾಸವಿದ್ದ ಕಾರಣಕ್ಕೆ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವಸತಿಗೃಹದಿಂದ ಕುಟುಂಬವೊಂದನ್ನು ಹೊರಹಾಕಲ್ಪಟ್ಟಿದ್ದ ಪ್ರಕರಣ ಸುಖಾಂತ್ಯಗೊಂಡಿದೆ. ಮೃತ ನೌಕರನ ಪುತ್ರನಿಗೆ ಗುತ್ತಿಗೆ ನೌಕರಿ ಕೊಡಲು ತೀರ್ಮಾನಿಸಲಾಗಿದೆ.

ಕಳೆದ ಎಂಟು ದಿನಗಳಿಂದ ಬೀದಿಗೆ ಬಿದ್ದಿದ್ದ ಕುಟುಂಬಕ್ಕೆ ತಾತ್ಕಾಲಿಕ ವಸತಿ ಗೃಹ ಸೌಲಭ್ಯ ನೀಡಲು ಹಾಗೂ ಮೃತ ನೌಕರನ ಪುತ್ರ ಶಾಂತಮಲ್ಲೇಶ್ ಅವರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲು ತೀರ್ಮಾನಿಸಲಾಗಿದೆ. ಪ್ರಾಧಿಕಾರದ ನೌಕರ ಜಯಸ್ವಾಮಿ 2019 ರಲ್ಲಿ ಮೃತಪಟ್ಟಿದ್ದರು. ಆದರೆ ಅವರ ಕುಟುಂಬದವರು ಪ್ರಾಧಿಕಾರದ ವಸತಿಗೃಹದಲ್ಲೇ ವಾಸ ಮುಂದುವರಿಸಿದ್ದರು. ಇದನ್ನೂ ಓದಿ:  ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

Malai Mahadeshwara Swamy Contractor 2

ಜಯಸ್ವಾಮಿ ಅವರ ಮರಣಾನಂತರ ನೀಡಬೇಕಿದ್ದ ಬಾಕಿ ಇರುವ ಗ್ರಾಚ್ಯುಯಿಟಿ, ಪಿಎಫ್ ಹಣ ನೀಡಬೇಕು. ಅನುಕಂಪದ ಆಧಾರದ ಮೇಲೆ ನೌಕರಿ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ನಿಯಮಾನುಸಾರ ವಸತಿ ಗೃಹ ಖಾಲಿ ಮಾಡಬೇಕು. ನಂತರವಷ್ಟೇ ಇತ್ಯರ್ಥಪಡಿಸುವುದಾಗಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದರು. ಅಲ್ಲದೆ ವಸತಿಗೃಹ ಖಾಲಿ ಮಾಡುವಂತೆ ನೋಟೀಸ್ ಸಹ ನೀಡಿದ್ದರು.

ನೋಟೀಸ್‍ಗೆ ಸ್ಪಂದಿಸದ ಕಾರಣ ಜ.14 ರಂದು ವಸತಿಗೃಹ ಖಾಲಿ ಮಾಡಿಸಿ ಬೀಗಮುದ್ರೆ ಹಾಕಲಾಗಿತ್ತು. ಇದಾದ ಬಳಿಕ ನಿರಾಶ್ರಿತರದ ಮೃತ ನೌಕರನ ಕುಟುಂಬದವರು ಪಾತ್ರೆಪಗಡಗಳೊಂದಿಗೆ ಬೀದಿಯಲ್ಲೇ ಕಾಲಕಳೆದಿದ್ದರು. ಈ ಸಂಬಂಧ ಪ್ರಾಧಿಕಾರದ ಅಧಿಕಾರಿಗಳು ಸಂತ್ರಸ್ತ ಕುಟುಂಬದವರು, ನೌಕರರ ಸಂಘದ ಪದಾಧಿಕಾರಿಗಳು ಹಾಗೂ ವೀರಶೈವ ಲಿಂಗಾಯತ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಿದರು.

ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ಹಿಂದೆ ದಿವಂಗತ ಜಯಸ್ವಾಮಿ ಅವರ ಮಗ ಶಾಂತಮಲ್ಲೇಶ್ ಹೊರಗುತ್ತಿಗೆಯಲ್ಲಿ ಸುಮಾರು 3-4 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಸಮರ್ಪಕವಾಗಿ ಕೆಲಸ ನಿರ್ವಹಿಸದ ಹಾಗೂ ಕೆಲಸದ ಒತ್ತಡ ಇಲ್ಲದ್ದರಿಂದ ಕಳೆದ ಒಂದು ವರ್ಷದಲ್ಲಿ ಕೆಲವರನ್ನು ಕೆಲಸದಿಂದ ಕೈಬಿಡಲಾಗಿತ್ತು. ಅದರಲ್ಲಿ ಇವರೂ ಒಬ್ಬರಾಗಿದ್ದು, ಇದೀಗ ಅವರಿಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಪಡೆಯಲಾಗುವುದು ಎಂದು ಭರವಸೆ ನೀಡಿದರು.

Malai Mahadeshwara Swamy Contractor 1

ಪಿಎಫ್ ಮೊತ್ತವನ್ನು ಪಡೆಯಲು ಬೇಕಾದ ದಾಖಲೆಗಳನ್ನು ಕುಟುಂಬಕ್ಕೆ ಕೋರಿದರೂ ಈವರೆಗೆ ಸಲ್ಲಿಸಿಲ್ಲ. ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಸಂಬಂಧಿತ ಸಂಸ್ಥೆಯಿಂದ ಆದಷ್ಟು ಬೇಗ ಬಿಡುಗಡೆ ಮಾಡಲು ಕೋರಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಾತ್ಕಾಲಿಕ ನೆಲೆಗಟ್ಟಿನಲ್ಲಿ ಈ ಹಿಂದೆ ತಾತ್ಕಾಲಿಕ ವಸತಿ ಗೃಹವನ್ನು ದಿ.ಜಯಸ್ವಾಮಿ ಅವರ ಮಗನಿಗೆ ನೀಡಲಾಗಿತ್ತು. ಅದನ್ನು ತಿರಸ್ಕರಿಸಿದ್ದರು. ಈಗ ಮತ್ತೆ ತಾತ್ಕಾಲಿಕ ನೆಲೆಗಟ್ಟಿನಲ್ಲಿ ತಾತ್ಕಾಲಿಕ ವಸತಿ ಕಲ್ಪಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಸಲ್ಮಾನ್ ಫಾರ್ಮ್‍ಹೌಸ್‍ನಲ್ಲಿ ಸೆಲೆಬ್ರಿಟಿಗಳ ಶವ, ಮಕ್ಕಳ ಕಳ್ಳ ಸಾಗಾಣಿಕೆ ನಡೆಯುತ್ತೆ ಎಂದ ನೆರೆಮನೆಯವ!

vlcsnap 2022 01 23 19h12m44s926

ಸಂತ್ರಸ್ತ ಕುಟುಂಬಸ್ಥರು ಇದಕ್ಕೆ ಒಪ್ಪಿಗೆ ಸೂಚಿಸಿದ್ದು, ವಸ್ತುಗಳನ್ನು ಸ್ಥಳಾಂತರಿಸಿ ಪ್ರಾಧಿಕಾರದ ತಾತ್ಕಾಲಿಕ ವಸತಿ ಗೃಹಕ್ಕೆ ಇಂದು ತೆರಳಿದ್ದಾರೆ. ಈಗಾಗಲೇ ಗ್ರಾಚುಯಿಟಿ ಹಣದಲ್ಲಿ ರೂ.3.11 ಲಕ್ಷ ಪಾವತಿಸಲಾಗಿದೆ. ಉಳಿಕೆ ಹಣ ರೂ. 1.35 ಲಕ್ಷದಲ್ಲಿ ಬಾಡಿಗೆ ಹಣ ತೆಗೆದುಕೊಂಡು ಉಳಿದ ಹಣವನ್ನು ಪಾವತಿಸಲು ಕೊರಿದ್ದು, ಕೂಡಲೇ ಕ್ರಮವಹಿಸಲಾಗುವುದು ಎಂದರು.

ಈ ಪ್ರಕರಣದಲ್ಲಿ ಪ್ರಾಧಿಕಾರವು ನಿಯಮಾನುಸಾರ ಕ್ರಮ ಕೈಗೊಂಡಿದೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಅಕ್ರಮವಾಗಿ ವಾಸವಿರುವವರನ್ನು ಖಾಲಿ ಮಾಡುವ ವಿಚಾರದಲ್ಲಿ ಪ್ರಾಧಿಕಾರದ ಗಮನಕ್ಕೆ ತರಲಾಗುವುದು. ನೌಕರರ ಸಂಘದವರೊಡನೆ ಸಹಾ ಚರ್ಚಿಸಿ ಇತ್ಯರ್ಥ ಪಡಿಸಲಾಗುವುದು ಹಾಗೂ ಖಾಯಂ ವಸತಿ ಗೃಹಗಳನ್ನು ಖಾಯಂ ನೌಕರರಿಗೆ ಹಂಚಿಕೆ ಮಾಡಲಾಗುವುದು ಎಂದು ವಿವರಿಸಿದರು.

TAGGED:chamarajanagarcontractorMalai Mahadeshwara Swamyಗುತ್ತಿಗೆ ನೌಕರಿಚಾಮರಾಜನಗರಮಲೈ ಮಹದೇಶ್ವರಸ್ವಾಮಿ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
1 hour ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
2 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
2 hours ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
2 hours ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
2 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?