ಚಾಮರಾಜನಗರ: ದೀಪಾವಳಿಯ ಅಂಗವಾಗಿ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ದೇವರ ಮಹಾ ರಥೋತ್ಸವವು ವಿಜೃಂಭಣೆಯಿಂದ ನೇರವೇರಿದೆ.
ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ಮಹಾ ರಥೋತ್ಸವವು ದೀಪಾವಳಿ ಹಬ್ಬದ ಅಂಗವಾಗಿ ಮೂರು ದಿನಗಳ ಕಾಲ ನಡೆಯುತ್ತದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ವಿಜೃಂಭಣೆಯಿಂದ ಮಹಾರಥೋತ್ಸವ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ತಮಿಳುನಾಡು, ಕೇರಳ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ಮಹದೇಶ್ವರನ ಕೃಪೆಗೆ ಪಾತ್ರರಾದರು.
ಜಾತ್ರೆಯ ಮೊದಲನೇ ದಿನ ಮಹದೇಶ್ವರನಿಗೆ ಎಣ್ಣೆ ಮಜ್ಜನ ನಡೆದರೆ, ಎರಡನೇ ದಿನ ಹಾಲರವಿ ಉತ್ಸವ ಮತ್ತು ಅಂತಿಮ ದಿನವಾದ ಇಂದು ಮಹಾರಥೋತ್ಸವ ನಡೆಯಿತು. ರಥೋತ್ಸವದಲ್ಲಿ ವೀರಗಾಸೆ, ಕಂಸಾಳೆ ಸೇರಿದಂತೆ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡಿದವು.
ಮಹಾರಥೋತ್ಸವ ವೇಳೆ ಕಾಲ್ತುಳಿತ ಕೂಡ ಉಂಟಾಗಿದ್ದು, ಹೋಮ್ ಗಾರ್ಡ್ ಸೇರಿದಂತೆ ಹಲವು ಮಂದಿಗೆ ಸಣ್ಣಪುಟ್ಟ ಗಾಯವಾಗಿವೆ. ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.