ದಾವಣಗೆರೆ: ಪ್ರೀತಿ (Love) ಪ್ರೇಮದ ಹೆಸರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಯುವಕನೊಬ್ಬ ವಂಚಿಸಿದ ಪ್ರಕರಣ ಹರಿಹರದಲ್ಲಿ (Harihara) ನಡೆದಿದೆ.
ಮಲೆಬೆನ್ನೂರು (Malebennuru) ಮೂಲದ ಮುಷ್ರಫ್ ಖಾನ್ ಎಂಬಾತನ ವಿರುದ್ಧ ದಾವಣಗೆರೆಯ (Davanagere) ಯುವತಿ ವಂಚನೆ ಆರೋಪ ಮಾಡಿದ್ದಾಳೆ. ಮುಷ್ರಫ್ ಮದುವೆ ಆಗುವುದಾಗಿ ಮುಚ್ಚಳಿಕೆ ಬರೆದುಕೊಟ್ಟು ಈಗ ನಾಪತ್ತೆಯಾಗಿದ್ದಾನೆ. ಅಲ್ಲದೇ ಪ್ರಭಾವಿ ನಾಯಕರ ಸಂಬಂಧಿ ಎಂದು ಬೆದರಿಕೆ ಹಾಕುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: 10 ಲಕ್ಷ ಹಣ, ಸ್ಕಾರ್ಪಿಯೋ ಕಾರಿಗಾಗಿ ಕಿರುಕುಳ – ಮದುವೆಯಾದ 6 ತಿಂಗಳಲ್ಲೇ ಗೃಹಿಣಿ ಆತ್ಮಹತ್ಯೆ
ಮದುವೆ ಆಗಲು 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ನ್ಯಾಯಕ್ಕಾಗಿ ಯುವತಿ ಹೋರಾಟ ಮಾಡುತ್ತಿದ್ದಾಳೆ. ಯುವಕ ಹಾಗೂ ಆತನಿಗೆ ಸಾಥ್ ನೀಡುತ್ತಿರುವವರನ್ನು ಬಂಧಿಸುವಂತೆ ಯುವತಿ ಆಗ್ರಹಿದ್ದಾಳೆ.
ದಾವಣಗೆರೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ ಆದರೂ ಸಹ ಪೊಲೀಸರು ಮೌನಕ್ಕೆ ಶರಣಾಗಿದ್ದಾರೆ ಎಂದು ಯುವತಿ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸ್ನ್ಯಾಪ್ಚಾಟ್ನಲ್ಲಿ ಪರಿಚಯ, ಪ್ರೀತಿಸಿ ಮದುವೆ – ಎರಡೇ ತಿಂಗಳಲ್ಲಿ ಪತ್ನಿ ಬೇಡ ಎಂದ ಪತಿ
