Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ

Bengaluru City

ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ

Public TV
Last updated: September 22, 2021 9:39 pm
Public TV
Share
2 Min Read
Male Mahadeshwara 2
SHARE

ಬೆಂಗಳೂರು: ಐದು ವರ್ಷದೊಳಗೆ ಮಲೆಮಹದೇಶ್ವರ ದೇವಸ್ಥಾನ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧ ಸಭಾಂಗಣದಲ್ಲಿ ಇಂದು ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದ ಧಾರ್ಮಿಕ ಕ್ಷೇತ್ರವಾದ ಮಲೆಮಹದೇಶ್ವರ ದೇವಸ್ಥಾನಕ್ಕೆ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರೇ ಹೆಚ್ಚು. ಬೆಂಗಳೂರು, ಮೈಸೂರು ಭಾಗದವರು ಮಾತ್ರವಲ್ಲ ರಾಜ್ಯದ ನಾನಾ ಭಾಗಗಳಿಂದ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಇದರ ಜೊತೆಗೆ ದೇವಸ್ಥಾನದ ಅಭಿವೃದ್ಧಿ ಕೂಡ ವೇಗ ಪಡೆದುಕೊಂಡಿದೆ. ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸಮಯ ನಿಗದಿ ಮಾಡಿಕೊಂಡು ಕ್ಷೇತ್ರಕ್ಕೆ ಆಗಮಿಸಲಾಗುವುದು ಎಂದು ಭರವಸೆ ನೀಡಿದರು.

CM Basavaraja Bommai 2

ಪ್ರಾಧಿಕಾರದ ಅಭಿವೃದ್ಧಿ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಸಹಕಾರ ಸಚಿವರು ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ನಿತ್ಯ ಸಾವಿರಾರು ಭಕ್ತರು ಆಗಮಿಸುವ ಮಲೆಮಹದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವರು, ದೇವಸ್ಥಾನದಲ್ಲಿ ಎಲ್ಲಾ ಸೌಲಭ್ಯಗಳ ಜೊತೆಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ:  ರೋಡಿಗೆ ಬಂದ ನಾಗರಹಾವು- ಅರ್ಧ ಗಂಟೆ ಸಂಚಾರ ಬಂದ್ 

CM Basavaraja Bommai

ದೇವಸ್ಥಾನದ ಹಿಂಭಾಗದ ದೀಪದಗಿರಿ ಒಡ್ಡಿನಲ್ಲಿ ಮಹದೇಶ್ವರ ಸ್ವಾಮಿ ಪ್ರತಿಮೆ ನಿರ್ಮಾಣದ ಬಗ್ಗೆ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ನಂತರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.

ಇದೇ ವೇಳೆ ಪ್ರಾಧಿಕಾರದ ಕ್ರಿಯಾ ಯೋಜನೆ ಹಾಗೂ ಮುಂದುವರಿದ ಕಾಮಗಾರಿಗಳಿಗೆ 141.20 ಕೋಟಿ ರೂ. ಗಳ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಕಾರ್ ಪಾರ್ಕಿಂಗ್ ಗೆ 40 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲು, ಹೊಸದಾಗಿ ಸ್ನಾನಘಟ್ಟ ನಿರ್ಮಾಣಕ್ಕೆ 4.95 ಕೋಟಿ ರೂ.ಗೆ ಅನುಮೋದನೆ ಸೇರಿದಂತೆ 49 ವಿವಿಧ ವಿಷಯಗಳಿಗೆ ಅನುಮೋದನೆ ನೀಡಲಾಯಿತು. ಇದನ್ನೂ ಓದಿ: ಮೈಸೂರು ಅರಮನೆಗೆ ಸೇರಿದ 4 ಆನೆಗಳು ಗುಜರಾತಿಗೆ ಶಿಫ್ಟ್

Male Mahadeshwara 4 medium

ಕ್ಷೇತ್ರದಲ್ಲಿ ಮಹದೇಶ್ವರ ಸ್ವಾಮಿ ಪ್ರತಿಮೆ ನಿರ್ಮಿಸಲು ಪ್ರಾಧಿಕಾರಕ್ಕೆ 450 ಕೆಜಿ ಬೆಳ್ಳಿಯ ಅವಶ್ಯಕತೆಯಿತ್ತು. ಆದರೆ ಭಕ್ತರು 500 ಕೆಜಿಯಷ್ಟು ಬೆಳ್ಳಿ ನೀಡಿದ್ದಾರೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಸಭೆಯ ಗಮನಕ್ಕೆ ತಂದರು.

ಸಭೆಯಲ್ಲಿ ಮುಜರಾಯಿ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ, ಶಾಸಕರಾದ ನಿರಂಜನ್ ಕುಮಾರ್, ಎನ್.ಮಹೇಶ್, ಪುಟ್ಟರಂಗಶೆಟ್ಟಿ, ನರೇಂದ್ರ, ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್, ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು, ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್, ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

TAGGED:BangaloreCM Basavaraja BommaiMalemahadeshwara HillpoliticsPublic TVಪಬ್ಲಿಕ್ ಟಿವಿಬೆಂಗಳೂರುಮಲೆಮಹದೇಶ್ವರ ಬೆಟ್ಟರಾಜಕೀಯಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Accident
Crime

ವ್ಯಾನ್‌ಗೆ ಬಸ್ ಡಿಕ್ಕಿ – ಐವರು ಸಾವು, 6 ಮಂದಿಗೆ ಗಾಯ

Public TV
By Public TV
14 minutes ago
Chikkaballapura 3
Chikkaballapur

ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

Public TV
By Public TV
19 minutes ago
Kashmir IED
Crime

ಪಂಜಾಬ್ & ಕಾಶ್ಮೀರದಲ್ಲಿ 2 IED ಪತ್ತೆ – ಭದ್ರತಾ ಪಡೆಗಳಿಂದ ನಿಷ್ಕ್ರಿಯ

Public TV
By Public TV
25 minutes ago
trump modi
Latest

ಟ್ರಂಪ್‌ ಸುಂಕ ರದ್ದುಗೊಳಿಸಿದ ಯುಎಸ್ ಸುಪ್ರೀಂ ಕೋರ್ಟ್ – ಭಾರತ ಫಸ್ಟ್‌ ರಿಯಾಕ್ಷನ್‌

Public TV
By Public TV
43 minutes ago
HD Kumaraswamy 1
Bengaluru City

ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಇದು ಅವರ ಜಾಯಮಾನದಲ್ಲಿ ಬಂದಿದೆ: ಹೆಚ್‌ಡಿಕೆ

Public TV
By Public TV
1 hour ago
H D Kumaraswamy 4
Bengaluru City

ಯಾರ ನಾಯಕತ್ವ ಬಂದ್ರೆ ಕಮಿಷನ್ ಹೋಗುತ್ತೆ ಅಂತ ಜನ ತೀರ್ಮಾನಿಸಲಿ: ಹೆಚ್‌ಡಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?