Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ತ ಕೊಟ್ಟೇವು, ನೀರು ಕೊಡೆವು: ಹೋರಾಟಕ್ಕೆ ಸಜ್ಜಾದ ಮಲೆನಾಡಿಗರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಕ್ತ ಕೊಟ್ಟೇವು, ನೀರು ಕೊಡೆವು: ಹೋರಾಟಕ್ಕೆ ಸಜ್ಜಾದ ಮಲೆನಾಡಿಗರು

Districts

ರಕ್ತ ಕೊಟ್ಟೇವು, ನೀರು ಕೊಡೆವು: ಹೋರಾಟಕ್ಕೆ ಸಜ್ಜಾದ ಮಲೆನಾಡಿಗರು

Public TV
Last updated: June 28, 2018 2:28 pm
Public TV
Share
2 Min Read
Linganamakki Dam
SHARE

ಶಿವಮೊಗ್ಗ: ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಮಲೆನಾಡಿನ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಂಗಳೂರಿಗರ ಬಾಯಾರಿಸಲು ಶರಾವತಿ ನದಿ ನೀರು ತರುತ್ತೇವೆ ಎಂದ ಪರಮೇಶ್ವರ್ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಲಿಂಗನಮಕ್ಕಿಯಿಂದ 425 ಕಿಲೋಮೀಟರ್ ದೂರದಲ್ಲಿರುವ ಬೆಂಗಳೂರಿಗೆ ನೀರನ್ನು ತರುವ ಬಗ್ಗೆ ವಿಸ್ತ್ರತ ಯೋಜನಾ ವರದಿ ತಯಾರಿಸಲು ಸೂಚಿಸಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಬಿ.ಎನ್. ತ್ಯಾಗರಾಜನ್ ಸಮಿತಿ ವರದಿ ಆಧರಿಸಿ, 151 ಅಡಿ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಿಂದ ಮೊದಲ ಹಂತದಲ್ಲಿ 30 ಟಿಎಂಸಿ ಹಾಗೂ ಎರಡನೇ ಹಂತದಲ್ಲಿ 60 ಟಿಎಂಸಿ ನೀರನ್ನು ಬೆಂಗಳೂರಿಗೆ ಪೂರೈಸಲು ಸರ್ಕಾರ ಉದ್ದೇಶಿಸಿದೆ.

ಕುಸಿದ ಅಂತರ್ಜಲ ಮಟ್ಟ: ಶರಾವತಿಗೆ ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣ ಮಾಡಿದಾಗ ಸುಮಾರು 12 ಸಾವಿರ ಎಕರೆ ದಟ್ಟ ಕಾಡು ಮುಳುಗಡೆ ಆಗಿದೆ. ಇದರಿಂದಾಗಿ ಈ ಭಾಗದಲ್ಲಿ ಮಳೆ ಪ್ರಮಾಣ ಅಗಾಧವಾಗಿ ಕಡಿಮೆ ಆಗಿದೆ. 320 ಇಂಚು ನೀರು ಬರುತ್ತಿದ್ದ ಈ ಪ್ರದೇಶದಲ್ಲಿ ಈಗ ಸರಾಸರಿ 70 ಇಂಚು ಬೀಳುತ್ತಿದೆ. ಇಷ್ಟು ನೀರು ವಿದ್ಯುತ್ ಉತ್ಪಾದನೆಗೆ ಸಾಕಾಗುವುದಿಲ್ಲ. ಇನ್ನು ಬೆಂಗಳೂರಿಗೆ ಕುಡಿಯಲು ನೀರು ಕೊಡಲು ಸಾಧ್ಯವೇ ಎಂದು ಹಿರಿಯ ಸಾಹಿತಿ ನಾ ಡಿಸೋಜಾ ಪ್ರಶ್ನಿಸಿದ್ದಾರೆ.

Sharavathi River

ಅಗಾಧ ಜೀವವೈವಿಧ್ಯತೆಯ ತಾಣವಾಗಿರುವ ಶರಾವತಿ ಲಿಂಗನಮಕ್ಕಿ ಪ್ರದೇಶದಿಂದ ನೀರನ್ನು ದೂರದ ಬೆಂಗಳೂರಿಗೆ ಸಾಗಿಸುವ ಬಗ್ಗೆ ಯೋಚಿಸುವುದು ಸರ್ಕಾರದ ಮೂರ್ಖತನ ಎನ್ನುತ್ತಾರೆ ಪರಿಸರವಾದಿಗಳು. ಸರ್ಕಾರ ಇದನ್ನು ಕೈಬಿಡದಿದ್ದಲ್ಲಿ ಮಲೆನಾಡಿನಲ್ಲಿ ಮತ್ತೊಂದು ದೊಡ್ಡ ಚಳವಳಿ ನಡೆಯಲಿದೆ ಎಂದು ಹಿರಿಯ ರಂಗಕರ್ಮಿ ಪ್ರಸನ್ನ ಎಚ್ಚರಿಸಿದ್ದಾರೆ.

ಅಧಿಕ ಹಣ ಬೇಡುವ, ಹೆಚ್ಚು ಅರಣ್ಯ ನಾಶವಾಗುವ ಇಂಥ ಯೋಜನೆಗಳನ್ನು ಕೈಬಿಡಿ, ಮಳೆ ಕೊಯ್ಲು, ಕೆರೆಗಳ ಪುನರುಜ್ಜೀವ ಇನ್ನಿತರ ಅಂಶಗಳ ಬಗ್ಗೆ ಗಮನ ಹರಿಸಿ. ವಿನಾಶಕಾರಿಯಾದ ಇಂಥ ಯೋಜನೆಗಳಿಗೆ ಕೈಹಾಕಬೇಡಿ ಎಂಬುದು ಶರಾವತಿ ನದಿ ಪಾತ್ರದ ಜನತೆ ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಪೂರೈಸುವ ಬಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕಂಡ ಕನಸು ಆರಂಭದಲ್ಲೇ ಭಾರೀ ವಿರೋಧ ಕೇಳಿಬಂದಿದೆ. ಈ ವಿರೋಧ ಲೆಕ್ಕಿಸದೆ ಸರ್ಕಾರ ಮುಂದುವರಿದಲ್ಲಿ ಮಲೆನಾಡು ಇನ್ನೊಂದು ಚಳವಳಿಗೆ ಸಜ್ಜಾಗಿದೆ.

linganamakki dam shimoga ho shimoga tourist attraction l47770z

2030ಕ್ಕೆ ಬೆಂಗಳೂರು:
2030ರ ವೇಳೆಗೆ ಬೆಂಗಳೂರಿನ ಜನಸಂಖ್ಯೆ 2.5 ಕೋಟಿ ಆಗುವ ಸಾಧ್ಯತೆಗಳಿವೆ. ಬೆಂಗಳೂರಿಗೆ ವಾರ್ಷಿಕ 54 ಟಿಎಂಸಿ ನೀರಿನ ಅಗತ್ಯವಿದ್ದು, ಕಾವೇರಿಯಿಂದ ಈಗಾಗಲೇ 30 ಟಿಎಂಸಿ ನೀರು ಪಡೆಯಲಾಗುತ್ತಿದೆ. ಆದ್ರೆ ಕಾವೇರಿಯಿಂದ ಹೆಚ್ಚಿನ ನೀರು ಪಡೆಯುವುದು ಅಸಾಧ್ಯದ ಮಾತು. ಹಾಗದ್ರೆ 2030ಕ್ಕೆ ಬೆಂಗಳೂರಿಗೆ 24 ಟಿಎಂಸಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಆಗಲಿದೆ.

ಟಿಎಂಸಿ ಅಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

LINGANAMAKKI2

TAGGED:cauverygroundwaterLinganamakkiMalenaduPublic TVSharavathiwaterಅಂತರ್ಜಲಕಾವೇರಿನೀರುಪಬ್ಲಿಕ್ ಟಿವಿಮಲೆನಾಡುಲಿಂಗನಮಕ್ಕಿಶರವಾತಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Turkey School Shooting By Student
Crime

ಟರ್ಕಿಯ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – 9 ಮಂದಿ ದುರ್ಮರಣ, ದಾಳಿಕೋರ ಸಾವು

Public TV
By Public TV
2 minutes ago
ballot paper counting india
Bengaluru City

ಈಗ ಅಧಿಕೃತ – ಕರ್ನಾಟಕದಲ್ಲಿ ಇನ್ಮುಂದೆ ಇವಿಎಂ ಬದಲು ಬ್ಯಾಲೆಟ್‌ ಪೇಪರ್‌

Public TV
By Public TV
19 minutes ago
GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
45 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
1 hour ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
1 hour ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?