ಬೆಂಗಳೂರು: ಬೆಳಗಾವಿಯ ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸಹೋದರರ ಸಮಸ್ಯೆಯನ್ನು ದಮನ ಮಾಡಲು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಾಗಿದ್ದಾರೆ.
ಈ ಕುರಿತು ಸದಾಶಿವನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯ ಸಮಸ್ಯೆಯಿಂದಾಗಿ ಎದ್ದಿರುವ ಸಮಸ್ಯೆಯನ್ನು ಕುರಿತು ಚರ್ಚಿಸಿ, ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡುತ್ತೇನೆ. ಅಲ್ಲದೇ ಅವರ ಗೊಂದಲ ಏನೆಂಬುದು ಸರಿಯಾಗಿ ನನಗೆ ಗೊತ್ತಿಲ್ಲ. ಅವರ ಜೊತೆ ಮಾತನಾಡಿ ಎಲ್ಲಾ ಬಗೆಹರಿಸುತ್ತೇನೆ. ರಮೇಶ್ ಜಾರಕಿಹೊಳಿಯವರು ಮೊದಲಿನಿಂದಲೂ ಕಾಂಗ್ರೆಸ್ಸಿನಲ್ಲಿಯೇ ಇದ್ದವರು, ಅವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಎಂದು ಹೇಳಿದರು.
ಬೆಳಗಾವಿಯ ಸಮಸ್ಯೆಯನ್ನು ಮಾಧ್ಯಮಗಳು ವೈಭವಿಕರಿಸಿ ಸೃಷ್ಟಿಸುತ್ತಿವೆ. ಬಿಜೆಪಿಯವರು ಸರ್ಕಾರ ರಚಿಸುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv