– ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ; ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಇರುತ್ತಾರೆ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಸಿಎಂ ಆಗೋ ಅರ್ಹತೆ ಇತ್ತು. ಆದರೆ ಆಗಲಿಲ್ಲ. ಆದ್ರೀಗ ಸಿಎಂ ಸ್ಥಾನಕ್ಕಿಂತ ದೊಡ್ಡ ಸ್ಥಾನವಾದ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಇದ್ದಾರೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ (R V Deshpande) ತಿಳಿಸಿದ್ದಾರೆ.
ಸಿಎಂ ಸ್ಥಾನದ ತಪ್ಪಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಜೊತೆ ನಾವು ಕೆಲಸ ಮಾಡಿದ್ದೇವೆ. ಧರ್ಮಸಿಂಗ್ ಹಾಗೂ ಎಸ್.ಎಂ ಕೃಷ್ಣ (S.M Krishna) ಸರ್ಕಾರದಲ್ಲಿ ಖರ್ಗೆ ಅವರು ಸಚಿವರಿದ್ರು. ಖರ್ಗೆಯವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇತ್ತು. ಆ ಸಮಯದಲ್ಲಿ ಹೈಕಮಾಂಡ್ ನಿರ್ಧಾರ ಮಾಡಿ ಎಸ್.ಎಂ ಕೃಷ್ಣ ಅವರನ್ನ ಸಿಎಂ ಮಾಡಿತ್ತು. ಅದನ್ನ ನಾವೆಲ್ಲಾ ಒಪ್ಪಿಕೊಂಡಿದ್ದೆವು ಎಂದಿದ್ದಾರೆ. ಇದನ್ನೂ ಓದಿ: ಡಿ-ಬಾಸ್ ಫ್ಯಾನ್ಸ್ನಿಂದ ಅಶ್ಲೀಲ ಮೆಸೇಜ್ – ನಟಿ ರಮ್ಯಾ ಬೆಂಬಲಕ್ಕೆ ನಿಂತ ದೊಡ್ಮನೆ ಕುಟುಂಬ
ಖರ್ಗೆ ಅವರು ಇವತ್ತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ. ಸಿಎಂ ಆಗುವ ಎಲ್ಲಾ ಅರ್ಹತೆ ಅವರಿಗೆ ಇದೆ. ಅವರಿಗೆ ಅದಕ್ಕಿಂತ ಹೆಚ್ಚಿನ ಸ್ಥಾನ ಸಿಕ್ಕಿದೆ. ಅದಕ್ಕೆ ನಮಗೆಲ್ಲಾ ಹಾಗೂ ನಾಡಿಗೂ ಅಭಿಮಾನ ಇದೆ. ನಮ್ಮ ದೃಷ್ಟಿಯಲ್ಲಿ ರಾಷ್ಟ್ರ ಅಧ್ಯಕ್ಷ ಎಂದರೆ ಸಿಎಂಗಿಂತ ದೊಡ್ಡ ಸ್ಥಾನ. ಅವರ ಮಾತನ್ನ ನಮ್ಮ ಸಿಎಂ ಕೇಳಬೇಕು. ತೆಲಂಗಾಣ ಸಿಎಂ ಕೂಡಾ ಕೇಳಬೇಕಾಗುತ್ತದೆ. ಅವರಿಗೆ ಅಂತಹ ಗೌರವ ಸ್ಥಾನ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ
ಖರ್ಗೆ ಅವರು ಎಲ್ಲಿಯೂ ಕೂಡ ಸಿಎಂ ಆಗ್ತೀನಿ ಎಂದು ಹೇಳಿಲ್ಲ. ಅವರಿಗೆ ಅವಕಾಶ ಮಾತ್ರ ಇರಲಿಲ್ಲ. ನನಗೂ ಸಿಎಂ ಆಗುವ ಅರ್ಹತೆ ಇತ್ತು. ಆದರೆ ಅವಕಾಶ ಸಿಕ್ಕಿಲ್ಲ. ಏನು ಮಾಡೋದು ಈಗ ಅಂತ ಹೇಳಿದ್ದಾರೆ. ಅವರಿಗೆ ಅವಕಾಶ ಇದ್ದಿದ್ದು ನಿಜ, ಅರ್ಹತೆ ಇದ್ದಿದ್ದು ನಿಜ. ಆದರೆ ಅವರು ಅಧಿಕಾರದ ಹಿಂದೆ ಬಿದ್ದವರಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ. ಯಾವ ಬದಲಾವಣೆಯು ಇಲ್ಲ. ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ. ಮುಂದೆಯೂ ಇರ್ತಾರೆ. ಕಾಂಗ್ರೆಸ್ ಹೈಕಮಾಂಡ್, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿಯವರ ಸಂಪೂರ್ಣ ಆಶೀರ್ವಾದ ಸಿದ್ದರಾಮಯ್ಯ ಅವರಿಗೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್ ಶಾ
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಸ್ಪಷ್ಟ ನಿಲುವು ನೀಡದ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್ ಈಗಾಗಲೇ ಹೇಳಿದೆ. ಕಾಂಗ್ರೆಸ್ ಪಕ್ಷ ಸಭೆ ಮಾಡಿ ಸಿದ್ದರಾಮಯ್ಯ ಅವರನ್ನ ಸಿಎಂ ಆಗಿ ಅಯ್ಕೆ ಮಾಡಿದೆ. ಇದು ಒಂದು ವರ್ಷಕ್ಕೆ ಮಾತ್ರ ಅಲ್ಲ. ಐದು ವರ್ಷಕ್ಕೆ ಆಯ್ಕೆ ಮಾಡಿದೆ. ಬದಲಾವಣೆ ಮಾಡುವ ಅಧಿಕಾರ ಹೈಕಮಾಂಡ್ಗೆ ಇದೆ, ಇಲ್ಲ ಅಂತ ನಾನು ಹೇಳಲ್ಲ. ಸಿಎಂ ಬದಲಾವಣೆ ಆಗುವ ರೀತಿ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣ ಆಗಿಲ್ಲ. ಎಲ್ಲರು ಒಂದಾಗಿ ಕೆಲಸ ಮಾಡ್ತಿದ್ದೇವೆ. ಸರ್ಕಾರ ಒಳ್ಳೆಯ ಕೆಲಸ ಮಾಡ್ತಿದೆ. ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.