ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸುವ ಶಕ್ತಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗಿಂತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ದಾವಣಗೆರೆ ಛಲವಾದಿ ಮಹಾಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರನ್ನು ಎದುರಿಸುವ ತಾಕತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದ್ದು, ರಾಹುಲ್ ಗಾಂಧಿಯಿಂದ ಮೋದಿಯನ್ನು ಎದುರಿಸಲು ಆಗುವುದಿಲ್ಲ. ಅದು ಕೇವಲ ಖರ್ಗೆಯ ಅವರಿಂದ ಮಾತ್ರ ಸಾಧ್ಯ ಎಂದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಮೊದಲ ದಲಿತ ಮುಖಂಡ ದಿವಂಗತ ಕೆಹೆಚ್ ರಂಗನಾಥ್, ದಿ. ಬಸವಲಿಂಗಪ್ಪ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ ಅವರಿಗೆ ಸಿಎಂ ಆಗಲು ಸಾಧ್ಯವಾಗಲಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಆಗುವುದಲ್ಲದೇ, ಈ ದೇಶದ ಪ್ರಧಾನಿಯಾಗುವ ಅರ್ಹತೆ ಕೂಡ ಇದೆ. ಇಂತಹವರು ಆ ಸ್ಥಾನವನ್ನು ಪಡೆದರೆ ದೇಶಕ್ಕೆ ಕೂಡ ಅನುಕೂಲ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv