Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

Districts

ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

Public TV
Last updated: March 17, 2022 9:35 pm
Public TV
Share
2 Min Read
MALLIKARJUBA KHERGE
SHARE

ಕಲಬುರಗಿ: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ನಿಜ ಅದನ್ನು ಸರಿಪಡಿಸಿ ಅವರಿಗೆ ಮನೆ, ಜಮೀನು ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ. ದೇಶಕ್ಕಾಗಿ ಲಕ್ಷಾಂತರ ಜನ ಪ್ರಾಣ ಬಿಟ್ಟಿದ್ದಾರೆ ಅಂತವರ ಚಿತ್ರ ತೆಗೆಯಿರಿ ಎಂದು ಬಿಜೆಪಿ ವಿರುದ್ಧ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

the kashmir files 2

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿಯೇ ಜನರನ್ನು ನೋಡಿ ಎಂದು ಹೇಳಿ ಪ್ರಚೋದಿಸುತ್ತಿದ್ದಾರೆ. ಆ ಚಿತ್ರ ತೆಗೆದ ಅಗ್ನಿಹೋತ್ರಿ ಅವರ ಪಕ್ಷದವರೆ ಆಗಿದ್ದಾರೆ. ಆ ಚಿತ್ರದ ಅನುಪಮ್ ಖೇರ್ ಪತ್ನಿ ಬಿಜೆಪಿಯಲ್ಲಿದ್ದಾರೆ. ಈ ಚಿತ್ರವನ್ನು ಬಿಜೆಪಿ ಪಾರ್ಟಿ ಮಿಟಿಂಗ್‍ನಲ್ಲಿ ಚಿತ್ರ ನೋಡಲು ಹೇಳುತ್ತಿದೆ. ನಾವು ಜೈಹಿಂದ್ ಅಂದ್ರೆ ಅವರು ಬೇರೆನೆ ಹೇಳ್ತಾರೆ. 2024 ರವರೆಗೆ ಇಂತಹ ಹಲವು ಚಿತ್ರಗಳು ಬರುತ್ತವೆ. ನಾನು ಕಾಶ್ಮೀರ್ ಫೈಲ್ಸ್ ಚಿತ್ರ ನೋಡಿಲ್ಲ, ಮೋದಿ ನೋಡಿ ಎಂದು ಹೇಳಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೆರಿಗೆ ಹೊರೆ ಶ್ರೀಮಂತರ ಮೇಲಲ್ಲ, ಬಡವರ ಮೇಲೆ ಬೀಳುತ್ತಿದೆ: ಕೇಂದ್ರದ ವಿರುದ್ಧ ಕೃಷ್ಣಬೈರೇಗೌಡ ವಾಗ್ದಾಳಿ

ಯಾರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡ್ತಾರೆ. ಅವರಿಂದ ನಾವು ಫೇರ್ ರಾಜಕಾರಣ ನೀರಿಕ್ಷಿಸಲು ಆಗಲ್ಲ. ಈ ಹಿಂದಿನ ಯಾವ ರಾಜಕಾರಣಿ ಸಹ ಹೀಗೆ ಮಾಡಿರಲಿಲ್ಲ. ಆದ್ರೆ ಸದ್ಯ ಧರ್ಮದ ಮೇಲೆ ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ಗುಡುಗಿದರು.

ಗುಜರಾತ್ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಕುರಿತು ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ಈಗ ಏನು ಮಾತನಾಡಲ್ಲ. ಒಂದು ಕಡೆ ಟೆಸ್ಟ್‌ಬುಕ್ ಕಮಿಟಿ ನಿರ್ಧಾರ ಅಂತಾರೆ. ಇನ್ನೊಂದು ಕಡೆ ಅವರೆ ನಿಯಮ ಮುರಿಯುತ್ತಾರೆ. ಭಗವದ್ಗೀತೆ ಕಡ್ಡಾಯ ಬಗ್ಗೆ ನಾನು ಈಗ ಮಾತನಾಡಿ ವಿವಾದ ಮಾಡಿಕೊಳ್ಳಲ್ಲ. ಈ ಬಗ್ಗೆ ಸದನದಲ್ಲಿ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ: ಸಿದ್ದರಾಮಯ್ಯ

NARENDRA MODI 1

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಮಾತನಾಡಿ, ಪಂಜಾಬ್‍ನಲ್ಲಿ ಒಳಜಗಳದಿಂದ ನಾವು ಅಧಿಕಾರ ಕಳೆದುಕೊಂಡಿದ್ದೇವೆ. ಇನ್ನುಳಿದ ನಾಲ್ಕು ರಾಜ್ಯಗಳಲ್ಲಿ ನಮ್ಮ ಸರ್ಕಾರ ಬಿಳಿಸಿ ಬಿಜೆಪಿ ಸರ್ಕಾರ ರಚಿಸಿತ್ತು. ಜನ ಎಲ್ಲೆಲ್ಲಿ ನಮ್ಮ ಪಕ್ಷಕ್ಕೆ ಸಪೋರ್ಟ್ ಮಾಡಿದರು ಇವರು ಬಿಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಕೊಲೆಯಾಗಿದೆ. ನಮ್ಮ ಸರ್ಕಾರ ರಚನೆ ಆಗುವಾಗ ಐಟಿ-ಇಡಿ ಮೂಲಕ ಹೆದರಿಸಿ ಸರ್ಕಾರ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಯಾವ ಪ್ರಧಾನಿ ಸಹ ತಿಂಗಳುಗಟ್ಟಲೆ ಪ್ರಚಾರಕ್ಕೆ ಹೋಗಿದ್ದರು?. ಪ್ರಧಾನಿ ದೇಶದ ಕೆಲಸ ಬಿಟ್ಟು ನೀತಿ ಸಂಹಿತೆ ಉಲಂಘಿಸಿ ಪ್ರಚಾರ ನಡೆಸಿದ್ದಾರೆ ಎಂದು ಜರಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ನಲ್ಲಿ ಬದಲಾವಣೆ ವಿಚಾರ ಮಾತನಾಡಿ, ಮೊನ್ನೆಯವರಗೆ ಸೋನಿಯಾ ಗಾಂಧಿ ಅವರನ್ನು ಹೊಗಳುತ್ತಿದ್ದರು. ಗೆದ್ದಾಗ ಇದೇ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಹೊಗಳಿದ್ದರು. ಕೆಲ ಜನರಿಗೆ ಅಧಿಕಾರ ಬೇಕು ಆದ್ರೆ ಅವರು ಅಷ್ಟು ಶಾಸಕರನ್ನೇ ಗೆಲ್ಲಿಸಿಲ್ಲಾ. ಇದೇ ನಾಯಕರೇ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ಕರೆತಂದಿದ್ದು ಇದೀಗ ಅವರೇ ಅವರ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ, ರಾಜೀವ ಗಾಂಧಿ ಗುಂಡಿಗೆ ಬಲಿಯಾಗಿದ್ದಾರೆ. ಈವರು ಯಾರಾದ್ರು ದೇಶಕ್ಕಾಗಿ ಜೀವ ಕೊಟ್ಟಿದ್ದಾರಾ. ಪಕ್ಷದ ಮೇಲೆ ಅಭಿಮಾನ ಇರುವವರು ಈ ರೀತಿ ಮಾತನಾಡುವುದು ಸರಿಯಲ್ಲ. CWC ಸಭೆಯಲ್ಲಿ ಇವರೆಲ್ಲ ಮಾತನಾಡಲ್ಲಾ. ಹೊರಗಡೆ ಮಾತ್ರ ನಾಯಕತ್ವದ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

TAGGED:'ದಿ ಕಾಶ್ಮೀರ್ ಫೈಲ್ಸ್'anupam kherbjpcongressmallikarjun khargenarendra modiThe Kashmir Filesಕಾಂಗ್ರೆಸ್ನರೇಂದ್ರ ಮೋದಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
35 minutes ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
1 hour ago
Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
2 hours ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
2 hours ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
3 hours ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?