ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ವಿಷ ಸರ್ಪಕ್ಕೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಹೇಳಿಕೆಯಿಂದ ಬಿಜೆಪಿಗೆ (BJP) ಲಾಭ ಆಗಲಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ (K Sudhakar) ಹೇಳಿದರು.
- Advertisement 2
ಚಿಕ್ಕಬಳ್ಳಾಪುರದಲ್ಲಿ (Chikkaballapur) ಮಾತನಾಡಿದ ಅವರು, ಖರ್ಗೆ ಹೇಳಿಕೆಯಿಂದ ಬಿಜೆಪಿ ಪಕ್ಷಕ್ಕೆ 2 ರಿಂದ 3% ಮತ ಹೆಚ್ಚಳವಾಗಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಈ ರೀತಿ ಭಾಷೆ ಬಳಸೋದು ಸರಿ ಅಲ್ಲ. 130 ಕೋಟಿ ಭಾರತೀಯರನ್ನು ಅವರು ಅಪಮಾನ ಮಾಡಿದ್ದಾರೆ. ಮೋದಿಯವರು ವಿಶ್ವ ನಾಯಕರು. ಇದು ಖರ್ಗೆಯವರ ರಾಜಕೀಯ ದಿವಾಳಿತನ ವ್ಯಕ್ತಿತ್ವ ತೋರ್ಪಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪುತ್ತಿಲ ಕಾಂಗ್ರೆಸ್, ಭಯೋತ್ಪಾದನೆ, ಲವ್ ಜಿಹಾದ್ ವಿರುದ್ಧ ಮಾತನಾಡಿಲ್ಲ: ಕಲ್ಲಡ್ಕ ಪ್ರಭಾಕರ ಭಟ್
- Advertisement 3
- Advertisement 4
ಮಲ್ಲಿಕಾರ್ಜುನ ಖರ್ಗೆಯವರ ಕಡೆಯಿಂದ ನಾನು ಇದನ್ನು ನೀರಿಕ್ಷೆ ಮಾಡಿರಲಿಲ್ಲ. ವೈಯಕ್ತಿಕ ನಿಂದನೆಗಳು ಮಾಡಬಾರದು. ವಿಷಯಾಧಾರಿತ ಆರೋಗ್ಯಕರ ಟೀಕೆಗಳು ಇರಬೇಕು. ಈ ರೀತಿ ಹೇಳಿಕೆಗಳಿಂದ ಅವರ ಸ್ಥಾನ ಮಾನ ಗೌರವಕ್ಕೆ ಧಕ್ಕೆಯಾಗಲಿದೆ. ಕರ್ನಾಟಕದ ಜನ ಈ ಮಾತಿನಿಂದ ಬಹಳಷ್ಟು ನೋವು ಅನುಭವಿಸಿದ್ದಾರೆ. ಹೀಗಾಗಿ ಅವರಿಗೆ ನಷ್ಟ ಬಿಜೆಪಿಗೆ ಲಾಭ ಆಗಲಿದೆ ಎಂದು ಸುಧಾಕರ್ ಟಾಂಗ್ ನೀಡಿದರು. ಇದನ್ನೂ ಓದಿ: ಮೋದಿ ನಾಗರಹಾವು ಆದ್ರೆ ಸೋನಿಯಾ ಗಾಂಧಿ ವಿಷಕನ್ಯೆನಾ – ಯತ್ನಾಳ್ ಪ್ರಶ್ನೆ