- ಭವಾನಿಪುರ, ನಂದಿಗ್ರಾಮ ಎರಡೂ ಕ್ಷೇತ್ರ ಗೆದ್ದ ಸುವೆಂದು ಅಧಿಕಾರಿ
ಕೋಲ್ಕತ್ತಾ: ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರು 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.
ಮತ ಎಣಿಕೆಯ ಆರಂಭದಲ್ಲಿ ಮಮತಾ ಬ್ಯಾನರ್ಜಿ, ಅಲ್ಪ ಮುನ್ನಡೆ ಸಾಧಿಸಿದ್ದರು. 19ನೇ ಸುತ್ತಿನ ಮತ ಎಣಿಕೆಯ ನಂತರ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ 15105 ಮತಗಳ ಮುನ್ನಡೆ ಸಾಧಿಸಿದ್ದಾರೆ. ಸುವೇಂದು ಅಧಿಕಾರಿ 73,917 ಮತಗಳನ್ನು (15,105 ಮತಗಳ ಮುನ್ನಡೆ) ಪಡೆದರೆ, ಮಮತಾ ಬ್ಯಾನರ್ಜಿ 58,812 ಮತಗಳನ್ನ ಪಡೆದುಕೊಂಡಿದ್ದಾರೆ.
ನಂದಿಗ್ರಾಮ ಕ್ಷೇತ್ರದಲ್ಲೂ ಸುವೆಂದು ಅಧಿಕಾರಿ ಗೆಲುವು ಸಾಧಿಸಿದ್ದಾರೆ. 127301 ಮತಗಳನ್ನು ಪಡೆದಿದ್ದು 9665 ಮತಗಳ ಮುನ್ನಡೆ ಸಾಧಿಸಿದ್ದಾರೆ. ಟಿಎಂಸಿಯ ಪಾಬಿತ್ರಾ ಕರ್ 117636 ಮತಪಡೆದುಕೊಂಡು, ಸೋತಿದ್ದಾರೆ. ಈ ಮೂಲಕ ಟಿಎಂಸಿಗೆ ಭಾರೀ ಮುಖಭಂಗವಾಗಿದೆ.
ರಾತ್ರಿ 9:30ರ ವೇಳೆಗೆ ಬಿಜೆಪಿ 176 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 32 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಹುಮತ ಪಡೆಯಲು 148 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.
ಪ್ರಸ್ತುತ ವಿರೋಧ ಪಕ್ಷದ ಪ್ರಬಲ ನಾಯಕನಾಗಿರುವ ಸುವೆಂದು ಅಧಿಕಾರಿ ಮುಖ್ಯಮಂತ್ರಿ ರೇಸ್ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಂಘಟನಾ ಚತುರ, ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸುವೇಂದು ಅಧಿಕಾರಿ ನಂದಿಗ್ರಾಮ್ ಮತ್ತು ಭವಾನಿಪುರ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದಾರೆ. ಈ ಹಿಂದೆ ಮಮತಾ ಬ್ಯಾನರ್ಜಿ ಸರ್ಕಾರದಲ್ಲೇ ಪ್ರಮುಖ ಸಚಿವ ಸ್ಥಾನಗಳನ್ನು ನಿರ್ವಹಿಸಿದ್ದ, ತಮ್ಲುಕ್ನಿಂದ ಸಂಸದನಾಗಿ ಸೇವೆ ಸಲ್ಲಿಸಿದ್ದ ಸುವೇಂದು ಈಗ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಬಿಜೆಪಿ ಸಿಎಂ ಸ್ಥಾನಕ್ಕೆ ಪರಿಗಣಿಸಿದೆ.












