ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಸೋಲನ್ನು 2024ರ ಲೋಕಸಭಾ ಚುನಾವಣೆಯಲ್ಲೂ ಕಾಣಲಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ತಿಂಗಳ 19ರಂದು ನಡೆಯುವ ಕೋಲ್ಕತ್ತಾದ ಮುನ್ಸಿಪಲ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಂಗಾಳವು ಕೋಮು ಸೌಹಾರ್ದ ರಾಜ್ಯವಾಗಿದೆ. ಆದರೆ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಕೋಮು ಸೌಹಾರ್ದತೆಯನ್ನು ಕೆಡಿಸಲು ನಡೆಸಿದಂತಹ ಪ್ರಚಾರವನ್ನು ಎಲ್ಲರೂ ನೋಡಿದ್ದೇವೆ ಎಂದು ಹರಿಹಾಯ್ದರು.
ಬಿಜೆಪಿಯವರು ಏನೇ ಮಾಡಿದರೂ ರಾಜ್ಯದ ಜನರು ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ನೀಡಿದ್ದಾರೆ. ಹಾಗೆಯೇ ಮುಂದಿನ ದಿನಗಳಲ್ಲಿ ಇಡೀ ದೇಶವೂ ಈ ರೀತಿಯಾಗೆ ಚಿಂತಿಸಿ ಬಿಜೆಪಿಯನ್ನು ಸೋಲಿಸುತ್ತದೆ ಎಂದರು. ಇದನ್ನೂ ಓದಿ: ಖಾಸಗಿ ಜೆಟ್ ಪತನಗೊಂಡು 9 ಮಂದಿ ದುರ್ಮರಣ
ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉದ್ಯಮವನ್ನು ಹೆಚ್ಚಿಸಿ ನಿರುದ್ಯೋಗಿಗಳಿಗೆ ಸಹಾಯ ಮಾಡುವುದು ತೃಣಮೂಲ ಕಾಂಗ್ರೆಸ್ಸಿನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕೆಲಸವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ನವದೆಹಲಿ-ಕರ್ನಾಟಕ ಎಕ್ಸ್ಪ್ರೆಸ್ನಲ್ಲಿ ಬಾಂಬ್ – ಹುಸಿ ಕರೆಗೆ ಪ್ರಯಾಣಿಕರು ಕಂಗಾಲು
ತೃಣ ಮೂಲ ಕಾಂಗ್ರೆಸ್ ಪಕ್ಷವು ರಾಷ್ಟ್ರಮಟ್ಟದಲ್ಲಿ ವಿಸ್ತರಿಸುತ್ತಿದೆ. ತ್ರಿಪುರಾದ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಲು ಇತ್ತೀಚೆಗೆ ಅಲ್ಲಿನ ಮುನ್ಸಿಪಲ್ ಚುನಾವಣೆಯಲ್ಲಿ ಟಿಎಂಸಿ ಬಿಜೆಪಿಯ ವಿರುದ್ಧ ಸ್ಪರ್ಧೆ ನಡೆಸಿತ್ತು. ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ವಿರುದ್ಧ ಗೆಲುವು ಸಾಧಿಸಲು ಟಿಎಂಸಿ ಸಜ್ಜಾಗುತ್ತಿದೆ.