ಕೋಲ್ಕತ್ತಾ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಪಂಚಾಯತ್ ಚುನಾವಣೆ ಪ್ರಚಾರ ಮುಗಿಸಿ ಮಮತಾ ಬ್ಯಾನರ್ಜಿ ಅವರು ಬಾಗ್ದೋಗ್ರಾದಿಂದ ಜಲಪೈಗೂರಿಗೆ ಹೆಲಿಕಾಪ್ಟರ್ನಲ್ಲಿ ತೆರಳುತ್ತಿದ್ದರು. ಈ ಭಾಗದಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ಉತ್ತರ ಬಂಗಾಳದ ಸಲಗರಾ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇದನ್ನೂ ಓದಿ: ವಿಪಕ್ಷ ನಾಯಕರು 20 ಲಕ್ಷ ಕೋಟಿ ಹಗರಣದ ಗ್ಯಾರಂಟಿ ಕೊಡುತ್ತಿದ್ದಾರೆ – ವಿರೋಧ ಪಕ್ಷದ ವಿರುದ್ಧ ಮೋದಿ ಕಿಡಿ
ಇಂದು ಮಧ್ಯಾಹ್ನ ಎರಡು ಗಂಟೆಗೆ ಈ ಘಟನೆ ನಡೆದಿದೆ. ‘ಹೆಲಿಕಾಪ್ಟರ್ ಲ್ಯಾಂಡ್ ಆಗಬೇಕಿದ್ದ ಭಾಗದಲ್ಲಿ ಭಾರೀ ಮಳೆಯಾಗುತ್ತಿತ್ತು. ಹೀಗಾಗಿ ಪೈಲಟ್ ತುರ್ತು ಲ್ಯಾಂಡಿಂಗ್ ಮಾಡಲು ನಿರ್ಧರಿಸಿದರು’ ಎಂದು ಮೂಲಗಳು ತಿಳಿಸಿವೆ.
ಬ್ಯಾನರ್ಜಿ ಅವರು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಿ, ನಂತರ ಕೋಲ್ಕತ್ತಾಗೆ ಹಿಂತಿರುಗಿದರು. ಇದನ್ನೂ ಓದಿ: ಸ್ಕೂಟರ್ನಲ್ಲಿ 7 ಮಕ್ಕಳನ್ನು ಒಟ್ಟಿಗೆ ಕರೆದೊಯ್ದ ವ್ಯಕ್ತಿ ವಿರುದ್ಧ ಎಫ್ಐಆರ್
ಜುಲೈ 8 ರಂದು ಮತದಾನ ನಡೆಯಲಿರುವ ಪಂಚಾಯತ್ ಚುನಾವಣೆಯ ಪ್ರಚಾರಕ್ಕಾಗಿ ಮುಖ್ಯಮಂತ್ರಿಗಳು ಉತ್ತರ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದರು.