ಪ್ರತಿಭಟನೆ ನಿಲ್ಲಿಸಲು ಮಮತಾ ಬ್ಯಾನರ್ಜಿ ಪ್ರಯತ್ನ – ಸಂತ್ರಸ್ತೆ ತಂದೆ ಆರೋಪ

Public TV
1 Min Read
Protest

ಕೋಲ್ಕತ್ತಾ: ಕೋಲ್ಕತ್ತಾದ (Kolkatta) ಆರ್‌ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ (RG Kar Medical College) ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸಂತ್ರಸ್ತೆ ತಂದೆ ಮಾತನಾಡಿ, ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಹಾಗೂ ಕೋಲ್ಕತ್ತಾ ಪೊಲೀಸರ ಪಾತ್ರದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಮ್ಮ ಮಗಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಆದ್ರೆ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜೊತೆಗೆ ಸಾಧ್ಯವಾದಷ್ಟು ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಇದನ್ನೂ ಓದಿ : ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

ಸಿಎಂ ಮಾಡುತ್ತಿರುವುದರ ಕುರಿತು ತೃಪ್ತಿಯಿಲ್ಲ ಹಾಗೂ ನಮಗೆ ಇದು ಅಸಂತೋಷವನ್ನುಂಟು ಮಾಡಿದೆ. ಆದ ಕಾರಣ ನಾವು ಯಾವುದೇ ಪರಿಹಾರ ಸ್ವೀಕರಿಸುವುದನ್ನು ನಿರಾಕರಿಸಿದ್ದೇವೆ ಎಂದು ಸಂತ್ರಸ್ತೆಯ ತಂದೆ ಮಾಧ್ಯಮದ ಬಳಿ ಹೇಳಿಕೊಂಡಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿದೆ. ಆದಷ್ಟು ಬೇಗ ಪ್ರಕರಣದ ಹಿಂದಿರುವ ಆರೋಪಿಗಳನ್ನು ಬಂಧಿಸುತ್ತಾರೆ ಎಂದು ನಾವು ನಂಬಿದ್ದೆವು. ಆದ್ರೆ ಈವರೆಗೆ ಏನೂ ನಡೆದಿಲ್ಲ. ಈ ಅಪರಾಧದಲ್ಲಿ ಆಸ್ಪತ್ರೆಯ ಎದೆ ಔಷಧ ವಿಭಾಗವು ಇದರಲ್ಲಿ ಭಾಗಿಯಾಗಿರುವ ಅನುಮಾನವಿದೆ. ಈ ಪ್ರಕರಣದಲ್ಲಿ ಇಲಾಖೆಯಾಗಲಿ, ಕಾಲೇಜಾಗಲಿ ನಮಗೆ ಸಹಕರಿಸಿಲ್ಲ. ಒಬ್ಬ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಇದರಲ್ಲಿ ಇನ್ನೂ ಕೆಲವರ ಪಾತ್ರವಿದೆ. ಈ ಪ್ರಕರಣಕ್ಕೆ ಸಂಪೂರ್ಣ ತನಿಖೆಯ ಜವಾಬ್ದಾರಿಯನ್ನು ಇಲಾಖೆಯೆ ನಿರ್ವಹಿಸಬೇಕು ಎಂದು ಸಂತ್ರಸ್ತೆಯ ಪೋಷಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಸಾರಿಗೆ ಬಸ್‍ನಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‍ರೇಪ್ – ಐವರು ಕಾಮುಕರು ಅರೆಸ್ಟ್

ಸದ್ಯ ಟ್ರೈನಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಬಿಐನ (CBI) ತನಿಖಾಧಿಕಾರಿಗಳು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸಿಬ್ಬಂದಿಗಳನ್ನ ವಿಚಾರಣೆ ನಡೆಸುತ್ತಿದ್ದಾರೆ.

Share This Article