ಅಮರಾವತಿ: ಪಾಪಿ ತಂದೆಯೊಬ್ಬ (Father) ಮಗು (Son) ಅಳುತ್ತಿದ್ದನ್ನು ನೋಡಿ ಕೋಪಗೊಂಡು ಅದನ್ನು ಹತ್ಯೆ ಮಾಡಿದ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿಯ ಶ್ರೀಕಾಳಹಸ್ತಿ ಶುಕಬ್ರಹ್ಮ ಆಶ್ರಮದ ಬಳಿಯ ವಾಟರ್ ಹೌಸ್ ಕಾಲೋನಿಯಲ್ಲಿ ನಡೆದಿದೆ.
ಅನಿಲ್ ತನ್ನ 3 ತಿಂಗಳ ಮಗುವನ್ನು ಕೊಲೆ ಮಾಡಿದ ಆರೋಪಿ. ಈತನಿಗೆ ಹಾಗೂ ಈತನ ಪತ್ನಿ ಸ್ವಾತಿ ಜಗಳ ನಡೆದಿತ್ತು. ಅದೇ ವೇಳೆ ಮಗುವಿಗೂ ಜ್ವರ ಬಂದಿದ್ದರಿಂದ ಒಂದೇ ಸಮನೆ ಅಳುತ್ತಿತ್ತು. ಇದರಿಂದಾಗಿ ಕೋಪಗೊಂಡ ಅನಿಲ್ ಮಗುವನ್ನು ನೆಲಕ್ಕೆ ಎಸೆದಿದ್ದಾನೆ.
ನಾಲ್ಕು ದಿನದಿಂದ ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದ ಮಗುವು ಅಸ್ವಸ್ಥಗೊಂಡಿತ್ತು. ಅಷ್ಟೇ ಅಲ್ಲದೇ ನೆಲಕ್ಕೆ ಆ ಮಗುವನ್ನು ಎಸೆದಿದ್ದರಿಂದ ಗಂಭೀರವಾಗಿ ತಲೆಗೆ ಪೆಟ್ಟು ಬಿದ್ದಿತ್ತು. ಇದರಿಂದಾಗಿ ಕೂಡಲೇ ಆ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಇದನ್ನೂ ಓದಿ: ಬರ್ತ್ಡೇ ಪಾರ್ಟಿಯಲ್ಲಿ ಅರೆಬೆತ್ತಲೆ ನೃತ್ಯ – ಕಾಂಗ್ರೆಸ್ ಸದಸ್ಯರ ನಂಗಾನಾಚ್
ಸ್ಥಳೀಯರು ಘಟನೆಗೆ ಸಂಬಂಧಿಸಿ ಕೂಡಲೇ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಅನಿಲ್ ಅನ್ನು ಮಗುವನ್ನು ಕೊಂದ ಆರೋಪದ ಮೇರೆಗೆ ಬಂಧಿಸಿದ್ದಾರೆ. ಇದನ್ನೂ ಓದಿ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ನಾಲ್ವರು ಮಾವೋವಾದಿಗಳ ಹತ್ಯೆ