ಅಕ್ಕನೊಂದಿಗೆ ಸಲುಗೆಯಿಂದಿದ್ದ ವ್ಯಕ್ತಿಯ ಹತ್ಯೆಗೆ ಸುಪಾರಿ- ತಮ್ಮನ ಬಂಧನ

Public TV
1 Min Read
CRIME 1

ಬೆಂಗಳೂರು: ಅಕ್ಕನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ವ್ಯಕ್ತಿಯೊಬ್ಬನ ಹತ್ಯೆಗೆ ಸುಪಾರಿ ಕೊಟ್ಟ ಆರೋಪಿಯನ್ನು ಚಿಕ್ಕಜಾಲ ಪೊಲೀಸರು (Chikkajala Police) ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೇಮಂತ್ ರೆಡ್ಡಿ ಎಂದು ಗುರುತಿಸಲಾಗಿದೆ. ತನ್ನ ಅಕ್ಕನ ಜೊತೆ ಶಶಾಂಕ್ ಎಂಬಾತ ಸಲುಗೆಯಿಂದ ಇದ್ದಿದ್ದಕ್ಕೆ ಆರೋಪಿ ಆತನ ಹತ್ಯೆಗೆ ಸುಪಾರಿ ಕೊಟ್ಟಿದ್ದ ಎಂದು ತಿಳಿದು ಬಂದಿದೆ. ಸುಪಾರಿ ಪಡೆದಿದ್ದ ಹಂತಕರು ಪೊಲೀಸರ ಬಲೆಗೆ ಬಿದ್ದಿದ್ದು, ಆರೋಪಿ ಹಣ ಕೊಟ್ಟಿದ್ದು ಬಾಯ್ಬಿಟ್ಟಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ತಲೆಗೆ 25 ಲಕ್ಷ ಬಹುಮಾನ ಘೋಷಿಸಲ್ಪಟ್ಟ ನಾಯಕ ಸೇರಿ 29 ನಕ್ಸಲರು ಬಲಿ

ಸೋಮವಾರ ರಾತ್ರಿ ಮಂಕಿ ಕ್ಯಾಪ್ ಹಾಕಿಕೊಂಡು ಮಾರಕಾಸ್ತ್ರ ಹಿಡಿದು ಶಶಾಂಕ್‍ಗಾಗಿ ಚಿಕ್ಕಜಾಲ ಬಳಿಯ ಗಂಟಿಗಾನಹಳ್ಳಿಯಲ್ಲಿ ಸುಪಾರಿ ಗ್ಯಾಂಗ್ ಕಾಯುತ್ತಿತ್ತು. ಈ ವೇಳೆ ಹೊಯ್ಸಳ ಪೊಲೀಸರು (Hoysala Police) ರೌಂಡ್ಸ್‌ಗೆ ತೆರಳಿದ್ದಾಗ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿತ್ತು. ಬಳಿಕ ತನಿಖೆ ವೇಳೆ ಸುಪಾರಿ ನೀಡಿದ್ದ ಹೇಮಂತ್ ರೆಡ್ಡಿ ಹೆಸರನ್ನು ಹಂತಕರ ಗ್ಯಾಂಗ್ ಬಾಯ್ಬಿಟ್ಟಿತ್ತು.

ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡಿದ್ದ ಎಎಸ್‌ಐ ಬೈಕನ್ನೇ ಬಳಸಿ ದರೋಡೆ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

Share This Article