ಚಿಕ್ಕಬಳ್ಳಾಪುರದಲ್ಲಿ ಸಿಕ್ಕ-ಸಿಕ್ಕವರ ಮೇಲೆ ಚಾಕು ಇರಿದು ಪರಾರಿಯಾಗಿದ್ದವ ಅರೆಸ್ಟ್

Public TV
1 Min Read
CKB ARREST copy

ಚಿಕ್ಕಬಳ್ಳಾಪುರ: ನಗರದ ಬಲಮುರಿ ವೃತ್ತ ಬಜಾರ್ ರಸ್ತೆಯಲ್ಲಿ ಸಿಕ್ಕ ಸಿಕ್ಕ ಸಾರ್ವಜನಿಕರಿಗೆ ಚಾಕು ಇರಿದು ಪರಾರಿಯಾಗಿದ್ದ ಸೈಕೋಪಾತ್ ಆರೋಪಿಯನ್ನು ಬಂಧಿಸುವಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಬಳ್ಳಾಪುರ ನಗರದ ನಿವಾಸಿ ಅರ್ಜುನ್ ಬಂಧಿತ ಆರೋಪಿ. ಅಸಲಿಗೆ ಮನೆಗೆ ಹೋಗದೆ ಹಾದಿ ಬೀದಿಯಲ್ಲೇ ಮಲಗೋ ಅಭ್ಯಾಸವಿದ್ದ ಅರ್ಜುನ್, ಈ ಕೃತ್ಯ ನಡೆಸಿರೋದು ಅಂತ ತಿಳಿದುಬಂದಿದೆ.

CKB ARREST 2

ಅರ್ಜುನ್ ಕಂದವಾರದ ಬಳಿಯ ದೇವಸ್ಥಾನವೊಂದರಲ್ಲಿ ಮಲಗುತ್ತಿದ್ದು, ಕಳೆದ 3 ದಿನಗಳ ಹಿಂದೆ ಪಕ್ಕದಲ್ಲಿ ಮಲಗಿದ್ದ ಒಬ್ಬನ ಬಳಿ ಮೊಬೈಲ್ ಕಳವು ಮಾಡಿದ್ದ ಎನ್ನಲಾಗಿದೆ. ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮೊಬೈಲ್ ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿದ್ದು, ತದನಂತರ ಮೊಬೈಲ್ ಮಾಲೀಕ ನಾಲ್ವರ ಸ್ನೇಹಿತರ ಜೊತೆ ಹೋಗಿ ಅರ್ಜುನ್ ಗೆ ಹಲ್ಲೆ ಮಾಡಿ ಬೆದರಿಸಿ ಮೊಬೈಲ್ ವಾಪಸ್ ಪಡೆದುಕೊಂಡಿದ್ರಂತೆ. ಇದನ್ನೂ ಓದಿ: ಮದ್ಯಪ್ರಿಯರಿಗೆ ಶಾಕ್‌ – ಇಂದಿನಿಂದ ಮದ್ಯ ಕೊರತೆ ಸಾಧ್ಯತೆ

CKB ARREST 1

ಇದೇ ವಿಚಾರದಲ್ಲಿ ಸಹ ನಿನ್ನೆಯೂ ಜೂನಿಯರ್ ಕಾಲೇಜು ಬಳಿ ಗಲಾಟೆ ನಡೆದಿದ್ದು, ಅರ್ಜುನ್ ಗಲಾಟೆ ನಂತರ ಜೂನಿಯರ್ ಕಾಲೇಜು ಕಡೆಯಿಂದ ಬಲಮುರಿ ವೃತ್ತದ ಮೂಲಕ ಬಜಾರ್ ರಸ್ತೆಗೆ ಬೈಕ್ ಮೂಲಕ ಬಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಮಹಿಳೆ ಸೇರಿ 06 ಮಂದಿ ಆಸ್ಪತ್ರೆ ಪಾಲಾಗಿದ್ದು, ಘಟನೆಯಿಂದ ಚಿಕ್ಕಬಳ್ಳಾಪುರ ನಗರದ ಜನತೆ ಬೆಚ್ಚಿಬಿದ್ದಿದ್ದರು.

CKB ARREST 2 1

ಸದ್ಯ ಘಟನೆ ನಡೆದ 4 ಗಂಟೆಗಳಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಆರೋಪಿ ಅರ್ಜುನ್ ನನ್ನ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಯಾರದ್ದೋ ಮೇಲಿನ ಕೋಪವನ್ನ ಮತ್ಯಾರೋ ಮೇಲೋ ಅರ್ಜುನ್ ತೀರಿಸಿಕೊಂಡಿದ್ದಾನೆ. ಸದ್ಯ ಆರೋಪಿಯಿಂದ ವಿವಿಧ ಮಾದರಿಯ ಚಾಕುಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕನ್ನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *