ಮದ್ವೆ ನೆಪದಲ್ಲಿ ಲೈಂಗಿಕ ಕಿರುಕುಳ ನೀಡ್ತಿದ್ದ ವ್ಯಕ್ತಿ ಅರೆಸ್ಟ್

Public TV
1 Min Read
CKM copy

ಚಿಕ್ಕಮಗಳೂರು: ಮದುವೆ ನೆಪದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಇದೀಗ ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು 52 ವರ್ಷದ ರಾಮಕೃಷ್ಣ ಎಂದು ಗುರುತಿಸಲಾಗಿದ್ದು, ಈತ ಮಂಡ್ಯದ ಮೂಲದವನು ಎಂಬುದಾಗಿ ತಿಳಿದುಬಂದಿದೆ. ರಾಮಕೃಷ್ಣ ಜಾಹಿರಾತು ಮೂಲಕ ಮಹಿಳೆಯರನ್ನ ವಂಚಿಸುತ್ತಿದ್ದನು. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಿಕ್ಷಕಿಯೊಬ್ಬರಿಗೆ ಇದೇ ರೀತಿ ಮೋಸ ಮಾಡಿ ಮೋಸ ಮಾಡಿದ್ದು, ಇದೀಗ ರಾಮಕೃಷ್ಣ ಪೊಲೀಸರ ಬಲೆಗೆ ಬಿದ್ದಿದ್ದಾನೆ.

Islamic marriage

ಮದುವೆಯ ನೆಪದಲ್ಲಿ ವರನನ್ನ ಹುಡುಕಿಕೊಂಡು ಬಂದವರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೇ ಮಹಿಳೆಯರಿಂದ ಹಣ, ಬಂಗಾರ ದೋಚುತ್ತಿದ್ದನು. ರಾಮಕೃಷ್ಣ ಸರ್ಕಾರಿ ನೌಕರಿಯ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದನು. ಎರಡನೇ ಮದುವೆ ಮಾಡಿಸುವ ನೆಪದಲ್ಲಿ ಹತ್ತಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು.

ಸದ್ಯ ರಾಮಕೃಷ್ಣ ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article