ಕಲಬುರಗಿ: ರಾಜ್ಯಾದ್ಯಂತ ಪಿಯುಸಿ ಪರೀಕ್ಷೆ (PUC Exam) ನಡೆಯುತ್ತಿದ್ದು, ಈ ವೇಳೆ ಕಲಬುರಗಿಯಲ್ಲಿ ಅಚಾತುರ್ಯವೊಂದು ನಡೆದಿದೆ.
ಹೌದು. ವ್ಯಕ್ತಿಯೊಬ್ಬ ತನ್ನ ತಂಗಿಗೆ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ ಮಾಡಿಲ್ಲ ಅಂತಾ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ್ ತಾಲೂಕಿನ ಕರಜಗಿ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಕೈಲಾಸ್ ಎಂಬಾತ ಪೊಲೀಸ್ ಪೇದೆ ಪಂಡಿತ್ ಪಾಂಡ್ರೆ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ನನ್ನ ತಂಗಿಗೆ ನಕಲು ಮಾಡಲು ಬಿಡಲ್ವಾ ಎಂದು ರೊಚ್ಚಿಗೆದ್ದ ಕೈಲಾಸ್, ಪಂಡಿತ್ ಪಾಂಡ್ರೆ ಮೇಲೆ ಹಲ್ಲೆ ಮಾಡಿದ್ದಾನೆ.
ಪ್ರಕರಣ ಸಂಬಂಧ ಆರೋಪಿ ಕೈಲಾಸ್ ಹಾಗೂ ಆತನ ಸ್ನೇಹಿತ ಸಮೀರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಅಫಜಲಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಾಲು ಸಾಲು ಆತ್ಮಹತ್ಯೆ- ಪ್ರತಿ ಮೆಟ್ರೋ ನಿಲ್ದಾಣದಲ್ಲೂ ಸ್ಕ್ರೀನ್ ಡೋರ್ ಅಳವಡಿಕೆಗೆ ಪ್ಲಾನ್