ವಿಜಯಪುರ: ಪಾಕಿಸ್ತಾನ ಧ್ವಜ ಮಾದರಿಗೆ ಸಿಂಹದ ಚಿತ್ರ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಬಳಿ ಘಟನೆ ನಡೆದಿದೆ.
ಹೊನವಾಡ ಗ್ರಾಮದ ಪೈಲ್ವಾನ್ ಉಮೇಶ ಹರಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಜತ್ತ ತಾಲ್ಲೂಕಿನ ಆಸಂಗಿ ಗ್ರಾಮದ ಅಫ್ಜಲ್ ಖಾನ್ ಮುಜಾವರ ಹಾಗೂ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊ ಳಗಾದ ಉಮೇಶ್ ಆರೋಪಿಸಿದ್ದಾನೆ. ಇದನ್ನೂ ಓದಿ: ಶಿರಸಿಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ 1 ರೂ. ಇಳಿಕೆ
ಪೈಲ್ವಾನ್ ಅಫ್ಜಲ್, ಹಸಿರು ಸಿಂಹದ ಮೇಲೆ ಅರ್ಧ ಚಂದ್ರನ ಫೋಟೋವನ್ನು ವಾಟ್ಸ್ಆ್ಯಪ್ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ಪೈಲ್ವಾನ್ ಉಮೇಶ ಹರಗಿ ವಾಟ್ಸಪ್ನಲ್ಲಿ ಪ್ರಶ್ನಿಸಿದ್ದ.
ಇದಕ್ಕೆ ಹೊನವಾಡ ಗ್ರಾಮದ ಬಳಿ ರಾಡ್ನಿಂದ ಹಲ್ಲೆಗೈದು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಗೊಂಡಿರುವ ಉಮೇಶ ಜಿಲ್ಲಾಸ್ಪತ್ರೆ ದಾಖಲಾಗಿದ್ದಾನೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್ – ಪೊಲೀಸರ ಅತಿಥಿ