200 ರೂ. ಕೊಡ್ಲಿಲ್ಲವೆಂದು ಬ್ಲೇಡ್‍ನಿಂದ ಕುತ್ತಿಗೆ ಕೊಯ್ಯಲು ಯತ್ನ!

Public TV
0 Min Read
200 rupees 2

ಬೆಳಗಾವಿ: 200ರೂ. ಕೊಡಲಿಲ್ಲ ಎಂಬ ಕಾರಣಕ್ಕೆ ಕುಡಿದ ನಶೆಯಲ್ಲಿ ಬ್ಲೇಡ್‍ನಿಂದ ಕುತ್ತಿಗೆ ಕೊಯ್ಯಲು ಯತ್ನಿಸಿದ ಘಟನೆ ಬೆಳಗಾವಿ ನಗರದ ಗ್ಯಾಂಗ್ ವಾಡಿಯಲ್ಲಿ ನಡೆದಿದೆ.

ರವಿ ಬಂಡಿವಡ್ಡರ್ ಹಲ್ಲೆಗೊಳಗಾದ ವ್ಯಕ್ತಿ. ರವಿ ಸಂಬಂಧಿ ಹನುಮಂತ ಈ ಕೃತ್ಯ ಎಸಗಿದ್ದಾನೆ.

200 ರೂಪಾಯಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ಹನುಮಂತ, ತನ್ನ ಸಂಬಂಧಿ ರವಿ ಕತ್ತನ್ನು ಬ್ಲೇಡ್ ನಿಂದ ಕೊಯ್ಯಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ರವಿಯನ್ನು ಬಚಾವ್ ಮಾಡಿದ್ದಾರೆ. ಬಳಿಕ ಅವರನ್ನು ನಗರದ ವಿಜಯ್ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.

ಆರೋಪಿ ಹನುಮಂತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *