ಬೆಂಗಳೂರು: ಹೈಕೋರ್ಟ್ನಲ್ಲಿ (High Court) ವ್ಯಕ್ತಿಯೊಬ್ಬರು ಆತ್ಮಹತ್ಯೆ ಯತ್ನಿಸಿದ (Suicide Attempt) ಘಟನೆ ಇಂದು ನಡೆದಿದೆ.
ಮೈಸೂರು ಮೂಲದ ಶ್ರೀನಿವಾಸ್(51) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮುಖ್ಯ ನ್ಯಾಯಾಧೀಶರ ಪೀಠ ಇರುವ ಕೋರ್ಟ್ ಹಾಲ್ 1ರ ಬಳಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿಗೆ ನನ್ನ ಬೆಂಬಲ: ಸುಮಲತಾ ಅಂಬರೀಶ್
ತಕ್ಷಣವೇ ಪೊಲೀಸರು ಶ್ರೀನಿವಾಸ್ ಅವರನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ (Bowring Hospital) ದಾಖಲಿಸಿದ್ದಾರೆ. ಪೊಲೀಸರು ಈಗ ಶ್ರೀನಿವಾಸ್ಗೆ ಸಂಬಂಧಿಸಿದದಂತೆ ಪೂರ್ವಾಪರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.