ನವದೆಹಲಿ: 50 ವರ್ಷದ ವ್ಯಕ್ತಿಯೋರ್ವ ಸುಪ್ರೀಂ ಕೋರ್ಟ್ನ ಹೊಸ ಕಟ್ಟಡದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ನೋಯ್ಡಾ ಸೆಕ್ಟರ್ 128ರಲ್ಲಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿರುವ ರಾಜಾ ಬಾಬು ಗುಪ್ತಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲ್ಲ, ತಾವಿದ್ದಲ್ಲಿಂದಲೇ ನನಗೆ ಹರಸಿ: ನಿಖಿಲ್ ಕುಮಾರಸ್ವಾಮಿ
ಘಟನೆ ವೇಳೆ ವ್ಯಕ್ತಿಗೆ ಅನೇಕ ಸುಟ್ಟ ಗಾಯಗಳಾಗಿದ್ದು, ಅವರನ್ನು ಲೋಕನಾಯಕ ಜೈ ಪ್ರಕಾಶ್ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹಿಂದಿನ ಕಾರಣ ಕುರಿತಂತೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಕೆಜಿಎಫ್ ಸಿನಿಮಾದ ಹಾಡಿಗೆ ಕಿಲಿ ಪೌಲ್ ಮಸ್ತ್ ಸ್ಟೆಪ್ಸ್