ರಸಗುಲ್ಲ ತಿನ್ನುವ ವಿಚಾರಕ್ಕೆ ಗಲಾಟೆ – ವ್ಯಕ್ತಿ ಸಾವು

Public TV
2 Min Read
Rasgulla 2

ಲಕ್ನೋ: ಮದುವೆಯೊಂದರಲ್ಲಿ (Wedding) ರಸಗುಲ್ಲ (Rasgulla) ತಿನ್ನುವ ವಿಚಾರವಾಗಿ ನಡೆದ ಜಗಳವು ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ (Uttara Pradesh) ಮೈನ್‍ಪುರಿಯಲ್ಲಿ ನಡೆದಿದೆ.

ಮೃತನನ್ನು ಹರ್ಯಾಣದ ರಣವೀರ್ ಸಿಂಗ್ (50) ಎಂದು ಗುರುತಿಸಲಾಗಿದೆ. ಮೈನ್‍ಪುರಿ ಜಿಲ್ಲೆಯ ಕುರವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಕಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

police jeep 1

ಮದುವೆಯೊಂದರಲ್ಲಿ ರಸಗುಲ್ಲ ತಿನ್ನುವ ವಿಚಾರಕ್ಕೆ ಜಗಳ ನಡೆದಿದೆ. ಮೊದಲಿಗೆ ವಧು ಹಾಗೂ ವರನ ಕಡೆಯವರಿಗೆ ಜಗಳ ನಡೆದಿದ್ದು, ಬಳಿಕ ಒಬ್ಬರಿಗೊಬ್ಬರು ಹಲ್ಲೆ ಮಾಡಿಕೊಂಡಿದ್ದಾರೆ. ಈ ವೇಳೆ ಇದು ವಿಕೋಪಕ್ಕೆ ಹೋಗಿದ್ದು, ಅಲ್ಲಿದ್ದ ರಣವೀರ್ ಸಿಂಗ್‍ಗೆ ಕಬ್ಬಿಣದ ರಾಡ್‍ನಿಂದ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ರಣವೀರ್ ಸಿಂಗ್‍ನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಘಟನೆ ವೇಳೆ ರಣವೀರ್‌ ಸಹೋದರ ಸಂಬಂಧಿ ರಾಮ್‌ ಕಿಶೋರ್‌ ಮೇಲೆಯೂ ನಾಲ್ವರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿಗಳನ್ನು ರಜತ್‌, ಅಜಯ್‌, ಸತ್ಯಭಾನ್‌ ಹಾಗೂ ಭರತ್‌ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಬಿಕಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ರಾಮ್‌ ಕಿಶೋರ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಕಡೆಗಣನೆ – ರಾಜ್ಯ ಸರ್ಕಾರಕ್ಕೆ ಈಡಿಗ ಸಮುದಾಯದಿಂದ ಎಚ್ಚರಿಕೆ

ARREST

ಈ ಬಗ್ಗೆ ರಣ್‍ವೀರ್ ಪುತ್ರ ಸಚಿನ್ ಕುಮಾರ್ ಮಾತನಾಡಿ, ಮದುವೆ ವೇಳೆ ಬಂದ ಅತಿಥಿಗಳಿಗೆ ನೀಡಲು ಬಕೆಟ್‍ಗಳಲ್ಲಿ ರಸಗುಲ್ಲವನ್ನು ಹಾಕಿ ಇಡಲಾಗಿತ್ತು. ಆದರೆ, ಇಲ್ಲಿಗೆ ಬಂದಿದ್ದ ವರನ ಕಡೆಯ ರಜತ್ ಎಂಬಾತ, ಇದನ್ನು ಕದ್ದು ತಿಂದಿದ್ದಲ್ಲದೆ, ಇನ್ನೊಂದು ಬಕೆಟ್‍ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ. ಇದನ್ನು ರಾಮ್‍ಕಿಶೋರ್ ಆಕ್ಷೇಪಿಸಿದ್ದು, ಇದಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಏರ್ಪಟ್ಟಿತು. ಸ್ವಲ್ಪವೇ ಹೊತ್ತಿನಲ್ಲಿ ರಜತ್ ಜೊತೆ ಆತನ ಮೂವರು ಸ್ನೇಹಿತರು ಸೇರಿಕೊಂಡು ಗಲಾಟೆ ಮಾಡಲು ಆರಂಭ ಮಾಡಿದರು ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಯೋಗಿಯಿಂದಲೇ ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಬಿಜೆಪಿ ಪ್ಲಾನ್‌

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *