ತಿರುವನಂತಪುರಂ: ರಸ್ತೆ ಅಪಘಾತಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ (Police Station) ಠಾಣೆಗೆ ಕರೆದೊಯ್ಯುತ್ತಿರುವಾಗ ಆತ ಸಬ್ ಇನ್ಸ್ಪೆಕ್ಟರ್ನ ಕಿವಿಯನ್ನು (Ear) ಕಚ್ಚಿದ ಘಟನೆ ಕೇರಳದ (Kerala) ಕಾಸರಗೋಡಿನಲ್ಲಿ ನಡೆದಿದೆ.
ಘಟನೆಯಲ್ಲಿ ಕಾಸಗೋಡಿನ ಟೌನ್ ಪೊಲೀಸ್ ಠಾಣೆಯ ಎಸ್ಐ ವಿಷ್ಣಪ್ರಸಾದ್ ಗಾಯಗೊಂಡಿದ್ದು, ಅವರನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್ ಅಪಘಾತಕ್ಕಿಡಾಗಿತ್ತಯ. ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಸ್ಟೇನಿಯನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆತನನ್ನು ಪೊಲೀಸ್ ಠಾಣೆಗೆ ಕರೆ ತರುವಾಗ ಎಸ್ಐ ವಾಹನದ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಇದನ್ನೂ ಓದಿ: ಮುತಾಲಿಕ್ ವಿರುದ್ಧ ಅಭ್ಯರ್ಥಿ ಹಾಕಿದ್ರೆ ಸಿ.ಟಿ.ರವಿ ವಿರುದ್ಧವೂ ಅಭ್ಯರ್ಥಿ : ಶ್ರೀರಾಮಸೇನೆ ಎಚ್ಚರಿಕೆ
ಈ ವೇಳೆ ಹಿಂದೆ ಕುಳಿತಿದ್ದ ಸ್ಟೇನಿ ಕೋಪದಲ್ಲಿ ವಿಷ್ಣು ಪ್ರಸಾದ್ ಅವರ ಬಲ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾನೆ. ತಕ್ಷಣ ಎಸ್ಐ ಅನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಸ್ಟೇನಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಚುನಾವಣೆಗೂ ಮೊದಲೇ ಆಪರೇಷನ್ ನ್ಯೂ ಸ್ಟಾರ್- ಬಿಜೆಪಿ ಹೊಸ ಅಸ್ತ್ರ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k