ರಾಜಕೀಯ ನಾಯಕರ ಹೆಸರು ಬಳಸಿ ಸೈಟ್ ಖರೀದಿ – ಲಕ್ಷ ಲಕ್ಷ ಹಣ ವಂಚನೆ ಆರೋಪ

1 Min Read

ನೆಲಮಂಗಲ(ಬೆಂಗಳೂರು): ದೊಡ್ಡ ದೊಡ್ಡ ರಾಜಕಾರಣಿಗಳ ಹೆಸರು ಹೇಳಿಕೊಂಡು ಲಕ್ಷ, ಲಕ್ಷ ಹಣ ವಂಚನೆ ಮಾಡಿರುವ ಆರೋಪವೊಂದು ಕೇಳಿಬಂದಿದೆ.

ಹೌದು. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಗ್ರಾಮದಲ್ಲಿ ಈ ಆರೋಪ ಕೇಳಿಬಂದಿದೆ. ಯೋಗನರಸಿಂಹ ಎಂಬವರು ಈ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಮತ್ತು ರೇಣುಕಾಚಾರ್ಯ ಹೆಸರೇಳಿಕೊಂಡು ವ್ಯಕ್ತಿ ಮೋಸ ಮಾಡಿದ್ದಾನೆ ಎಂದು ಆರೋಪ ಮಾಡಿದ್ದಾರೆ.

ತನ್ನ ಪತ್ನಿ ಹೆಸರಿಗೆ ಸೇರಿದ ಖಾಲಿ ನಿವೇಶನವನ್ನು ಬಿಜೆಪಿ ಮುಖಂಡ ರವಿಕುಮಾರ್ ಎಂಬವರಿಗೆ ರಿಜಿಸ್ಟರ್ ಮಾಡಿಕೊಟ್ಟು ಉಳಿಕೆ 12 ಲಕ್ಷದ ಡಿಡಿ ನೀಡಿದ್ದು ಆ ಡಿಡಿ ಕೂಡ ನಕಲು ಎಂದು ಯೋಗನರಸಿಂಹ ಆರೋಪ ಮಾಡ್ತಿದ್ದಾರೆ. ಲಕ್ಷ ಲಕ್ಷ ವಂಚನೆ ಮಾಡಿರುವ ವಿಚಾರಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನೂ ಓದಿ: ಹಿಂದೂಗಳಿಲ್ಲದೆ ಭಾರತವಿಲ್ಲ, ಭಾರತವಿಲ್ಲದೆ ಹಿಂದೂಗಳಿಲ್ಲ: ಮೋಹನ್ ಭಾಗವತ್

ತನ್ನ ರಾಜಕೀಯ ಪ್ರಭಾವದಿಂದ ಒತ್ತಡ ಹಾಕಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಕೂಡಲೇ ಅಧಿಕಾರಿಗಳು ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಬಡವರಿಗೆ ಸಹಾಯ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ವಾರದಲ್ಲಿ ಮೂರನೇ ಬಾರಿ ಗೌತಮ್‌ ಗಂಭೀರ್‌ಗೆ ಐಸಿಸ್‌ನಿಂದ ಕೊಲೆ ಬೆದರಿಕೆ

Share This Article
Leave a Comment

Leave a Reply

Your email address will not be published. Required fields are marked *