ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬರ್ರಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ವರದಕ್ಷಿಣೆಗಾಗಿ ಪತ್ನಿಯ ನಾಲಗೆ ಕತ್ತರಿಸಿ ಆಕೆಯನ್ನು 10 ದಿನಗಳ ಕಾಲ ಮನೆಯಲ್ಲೇ ಕೂಡಿ ಹಾಕಿದ ವಿಲಕ್ಷಣೀಯ ಘಟನೆ ಭಾನುವಾರದಂದು ಬೆಳಕಿಗೆ ಬಂದಿದೆ.
ಬರ್ರಾ ಪ್ರದೇಶದ ನಿವಾಸಿ ಆಕಾಶ್ ಎಂಬಾತ ಪತ್ನಿಯ ನಾಲಗೆ ಕತ್ತರಿಸಿದ ಪತಿ. ನವೆಂಬರ್ 06 ರಂದು ಆಕಾಶ್ ಹಾಗೂ ಆತನ ಪತ್ನಿ ನಡುವೆ ವರದಕ್ಷಿಣೆ ವಿಚಾರವಾಗಿ ಜಗಳವಾಗಿತ್ತು. ಜಗಳದಿಂದ ಕೋಪಗೊಂಡ ಆಕಾಶ್ ಪತ್ನಿಯ ನಾಲಗೆಯನ್ನು ಕತ್ತರಿಸಿದ್ದಾನೆ. ಬಳಿಕ ಆಕೆಗೆ ಚಿಕಿತ್ಸೆಯನ್ನು ಕೊಡಿಸದೆ ಸುಮಾರು 10 ದಿನಗಳ ಕಾಲ ಮನೆಯಲ್ಲಿಯೇ ಕೂಡಿ ಹಾಕಿ ಚಿತ್ರಹಿಂಸೆ ಕೊಟ್ಟಿದ್ದಾನೆ. ನಂತರ ಪಾಪಿ ಪತಿ ಕೈಯಿಂದ ತಪ್ಪಿಸಿಕೊಂಡು ಪತ್ನಿ ತನ್ನ ತಂದೆಗೆ ನಡೆದ ಘಟನೆಯನ್ನು ತಿಳಿಸಿದ್ದಾಳೆ.
ಘಟನೆ ತಿಳಿದ ಮೇಲೆ ನನ್ನ ತಂದೆ ಆಕಾಶ್ ಹಾಗೂ ಆತನ ಕುಟುಂಬದವರ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಆಕಾಶ್ ತಂದೆ ವೃತ್ತಿಯಲ್ಲಿ ಪೊಲೀಸ್ ಅಧಿಕಾರಿ. ಅದಕ್ಕಾಗಿ ನಾವು ನೀಡಿದ ದೂರನ್ನು ಸ್ಥಳಿಯ ಪೊಲೀಸರು ಕಡೆಗಣಿಸಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಪತಿಯ ವಿರುದ್ಧ ಪತ್ನಿ ಕಾನ್ಪುರ ಹಿರಿಯ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದಾಳೆ.
ಸದ್ಯ ಆರೋಪಿಯ ಮೇಲೆ ಕಾನ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಅದಷ್ಟು ಬೇಗ ಬಂಧಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿ ಆದೇಶಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews