ಮೈಸೂರು: ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ (Heart Attack) ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.
ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38) ಮೃತ ವ್ಯಕ್ತಿ. ಉದಯಗಿರಿಯ (Udayagiri) ಮೆಡಿಕಲ್ ಸ್ಟೋರ್ಗೆ (Medical Store) ಔಷಧಿ ಕೊಳ್ಳಲು ಹೋಗಿದ್ದಾಗ ಜಗದೀಶ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಜಗದೀಶ್ ಮೆಡಿಕಲ್ ಸ್ಟೋರ್ಗೆ ಔಷಧಿ ಕೊಳ್ಳಲು ಬಂದಿದ್ದರು. ಜಗದೀಶ್ ನೋವಿನ ಹಿನ್ನೆಲೆ ತಮ್ಮ ಎದೆಗೆ ಕೈಹಿಡಿದುಕೊಂಡು ಬಂದಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಮೆಡಿಕಲ್ ಸಿಬ್ಬಂದಿ ಜಗದೀಶ್ ಅವರನ್ನು ವಿಚಾರಿಸುತ್ತಿದ್ದ ವೇಳೆಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದನ್ನೂ ಓದಿ: ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ – ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು
ತಕ್ಷಣ ಮೆಡಿಕಲ್ ಸಿಬ್ಬಂದಿ ಜಗದೀಶ್ ಕಡೆಗೆ ಓಡಿ ಹೋಗಿ ಅವರನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಜಗದೀಶ್ ಪ್ರಾಣಪಕ್ಷಿ ಹಾರಿಹೋಗಿದೆ. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾನು ಕಾಂಗ್ರೆಸ್ ಸದಸ್ಯೆಯಲ್ಲ – ಉಲ್ಟಾ ಹೊಡೆದ ಶಾಸಕಿ
Web Stories