ಬೆಂಗಳೂರು: 5 ಅಂತಸ್ತಿನ ಕಟ್ಟಡದಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೇಷಾದ್ರಿಪುರಂನ ನಟರಾಜ್ ಚಿತ್ರಮಂದಿರದ ಬಳಿ ನಡೆದಿದೆ.
40 ವರ್ಷದ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರವೀಣ್ ಮೂಲತಃ ಚಿಕ್ಕಮಗಳೂರ ನಿವಾಸಿಯಾಗಿದ್ದು, ಕಳೆದ ಮೂರು ವರ್ಷಗಳಿಂದ ಆನಂದ್ ರಾವ್ ಸರ್ಕಲ್ ನಲ್ಲಿರುವ ಹೋಟೆಲ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದನು.
ಆರು ತಿಂಗಳ ಹಿಂದೆ ಕೆಲಸ ಬಿಟ್ಟು ಹೋಗಿ ವಾರದ ಹಿಂದಷ್ಟೇ ಬಂದು ಕೆಲಸಕ್ಕೆ ಸೇರಿದ್ದ. ಎರಡು ಮೂರು ದಿನ ಕೆಲಸಕ್ಕೆ ಹೋಗಿ ಎರಡು ದಿನದಿಂದ ಕುಡಿದು ರೂಮಿನಲ್ಲಿಯೇ ಇದ್ದನು. ಬಳಿಕ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಬಹು ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.