ಬೆಂಗಳೂರು: ರೈಲ್ವೇ ಹಳಿಯಲ್ಲಿ ರುಂಡ ಮುಂಡ ತುಂಡಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ರೇಣುಕಾನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತ ವ್ಯಕ್ತಿಯನ್ನು ಗೆದ್ದಲಹಳ್ಳಿಯ ನಿವಾಸಿ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ. ಯಶವಂತಪುರ ಹಾಸನ ಮಾರ್ಗದ ರೈಲ್ವೇ ಹಳಿಯ ಜನನಿಬಿಡ ಪ್ರದೇಶದಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಈ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕವನ್ನು ಮೂಡಿಸಿದೆ.
- Advertisement 2
- Advertisement 3
ಜನರು ಓಡಾಡುತ್ತಿದ್ದಂತಹ ಪ್ರದೇಶದ ಸಮೀಪದಲ್ಲಿಯೇ ಇಂದು ಬೆಳಗ್ಗೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶವವನ್ನು ನೋಡಿದ ಜನರು ನೋಡಿ ತಕ್ಷಣ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ನೆಲಮಂಗಲ ಪಟ್ಟಣ ಹಾಗೂ ಯಶವಂತಪುರ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
- Advertisement 4
ಪೊಲೀಸರು ಪರಿಶೀಲನೆ ನಡೆಸುವಾಗ ಮೃತ ವ್ಯಕ್ತಿ ಬಟ್ಟೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಇದರಲ್ಲಿ ನಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಯಾರೊಬ್ಬರು ನನ್ನ ಯೋಗಕ್ಷೇಮವನ್ನು ವಿಚಾರಿಸುತ್ತಿರಲಿಲ್ಲ. ಆದ್ದರಿಂದ ನನಗೆ ಜೀವನದಲ್ಲಿ ಜಿಗುಪ್ಸೆಯಾಗಿದೆ. ಇದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ತನ್ನ ಕುಟುಂಬಸ್ಥರ ಬಗ್ಗೆ ಬೇಸರವನ್ನು ವ್ಯಕ್ತಪಡಿಸಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದರು. ಪೊಲೀಸರು ಈ ಪ್ರಕರಣ ಕುರಿತು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.