– ಕಣ್ಣಮುಂದೆಯೇ ಮಗನ ಸಾವು ಕಂಡು ಕಣ್ಣೀರಿಟ್ಟ ತಂದೆ
ಬಾಗಲಕೋಟೆ: ಯುವಕನೊಬ್ಬ ಬೈಕಿನಿಂದ ಇಳಿದು ಓಡಿ ಹೋಗಿ ಚಲಿಸುತ್ತಿದ್ದ ರೈಲಿನ ಮುಂದೆ ಮಲಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ನಗರದಲ್ಲಿ ನಡೆದಿದೆ.
ಬಾಗಲಕೋಟೆ ತಾಲೂಕಿನ ಗುಳಬಾಳ ತಾಂಡಾದ ನಿವಾಸಿ ಪರಶುರಾಮ್ ರಾಠೋಡ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಪರಶುರಾಮ್ ಬಾಗಲಕೋಟೆಯ ಹೆಸ್ಕಾಂನಲ್ಲಿ ಲೈನ್ಮನ್ ಆಗಿ ಕೆಲಸ ಮಾಡುತ್ತಿದ್ದ. ತಮ್ಮ ಮುಂದೆಯೇ ಮಗ ಆತ್ಮಹತ್ಯೆ ಶರಣಾಗಿದ್ದಕ್ಕೆ ತಂದೆ ಕಣ್ಣೀರಿಟ್ಟಿದ್ದಾರೆ.
ಘಟನೆಯ ವಿವರ:
ಪರಶುರಾಮ್ ತನ್ನ ಸಹೋದರ ಹಾಗೂ ತಂದೆಯ ಜೊತೆಗೆ ಬಾಗಲಕೋಟೆಗೆ ಬರುತ್ತಿದ್ದ. ಈ ವೇಳೆ ವಿಜಯಪುರದಿಂದ ಹುಬ್ಬಳ್ಳಿಗೆ ಹೊರಟಿದ್ದು, ರೈಲು ಗೇಟ್ ಹಾಕಲಾಗಿತ್ತು. ಆದರೆ ಪರಶುರಾಮ್ ಬೈಕ್ನಿಂದ ಇಳಿದು ತಕ್ಷಣವೇ ರೈಲು ಹಳಿಯ ಮೇಲೆ ತಲೆ ಇಟ್ಟು ಮಲಗಿದ್ದಾನೆ. ಪರಿಣಾಮ ರೈಲು ಹರಿದು ಪರಶುರಾಮ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕಣ್ಣ ಮುಂದೆಯೇ ಮಗ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿ ಪರಶುರಾಮ್ ತಂದೆ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಬಾಗಲಕೋಟೆ ಶಹರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಯುವಕ ಪರಶುಮ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv