ಮಡಿಕೇರಿ: ವ್ಯಕ್ತಿಯೊಬ್ಬರು ಮಂಗಳವಾರ ಬೆಳಗ್ಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ನಿವಾಸಿ ಚಿಯಕಪೂವಂಡ ರಂಜು ತಿಮ್ಮಯ್ಯ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇದನ್ನೂ ಓದಿ: ಬಾಲಿವುಡ್ ನಟ ಸೋನು ಸೂದ್ ಪತ್ನಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ
ರಂಜು ತಿಮ್ಮಯ್ಯ ಅವರು ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮಾ. 25ರಂದು ಬೆಳಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಹನಿಟ್ರ್ಯಾಪ್ ಪ್ರಕರಣ ಸಿಬಿಐಗೆ ಕೊಡುವ ಅಗತ್ಯವಿಲ್ಲ: ವಿನಯ್ ಕುಲಕರ್ಣಿ
ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ (Napoklu Police Station) ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸಾಕು ನಾಯಿ ದಾಳಿ – ಮಹಿಳೆಯ ಮುಖಕ್ಕೆ ಬಿತ್ತು 20 ಸ್ಟಿಚ್