ಕಾರಿನೊಳಗೆ ಶೂಟ್ ಮಾಡಿಕೊಂಡ ಉದ್ಯಮಿ

Public TV
1 Min Read
KWR SUICIDE

ಕಾರವಾರ: ಉದ್ಯಮಿಯೊಬ್ಬ ಕಾರಿನೊಳಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾನಾಪುರ ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರಿನ ಟಿ.ನರಸೀಪುರ ನಿವಾಸಿ ಮಂಜುನಾಥ್ ವಾಸು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರಿನಲ್ಲೇ ಕುಳಿತು ನಾಡ ಬಂದೂಕನಿಂದ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಜುನಾಥ್ ಶನಿವಾರ ರಾತ್ರಿಯೇ ಖಾನಾಪುರ ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ಪಾರ್ಕ್ ಮಾಡಿ ಶೂಟ್ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂದು ಮುಂಜಾನೆ ಗ್ರಾಮಸ್ಥರು ಕಾರು ನಿಂತಿರುವುದನ್ನು ನೋಡಿ ಅನುಮಾನಗೊಂಡು ಪರಿಶೀಲನೆ ಮಾಡಿದ್ದಾರೆ. ಆಗ ವ್ಯಕ್ತಿಯೊಬ್ಬ ಕಾರಿನಲ್ಲಿ ಮೃತಪಟ್ಟಿರುವುದು ತಿಳಿದಿದೆ. ಬಳಿಕ ಹಳಿಯಾಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಹಳಿಯಾಳ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *