ಪೊರಕೆಯಿಂದ ಹೊಡೆದು ಜಾತಿನಿಂದನೆ ಆರೋಪ- ವ್ಯಕ್ತಿ ಆತ್ಮಹತ್ಯೆ

Public TV
1 Min Read
KOLAR SUICIDE

ಕೋಲಾರ: ಪೊರಕೆಯಿಂದ ಹೊಡೆದು ಜಾತಿನಿಂದನೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದ ನಿವಾಸಿ ಶ್ರೀನಿವಾಸ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸ್ನೇಹಿತರೊಬ್ಬರ ಪತ್ನಿಯ ಕುರಿತು ಶ್ರೀನಿವಾಸ್ ತಪ್ಪಾಗಿ ಮಾತಾಡಿದ್ರು ಎಂಬ ಕಾರಣಕ್ಕೆ ಹಿಗ್ಗಾಮುಗ್ಗವಾಗಿ ಥಳಿಸಲಾಗಿದೆ.

ಬುಧವಾರ ಸಂಜೆ ಎಣ್ಣೆ ಪಾರ್ಟಿ ಮಾಡುವಾಗ ಸ್ನೇಹಿತರ ಬಳಿ ಮಂಜುಳಾ ಬಗ್ಗೆ ಶ್ರೀನಿವಾಸ್ ಮಾತನಾಡಿದ್ದರು. ಈ ವೇಳೆ ಅಶೋಕ್, ರಮೇಶ್, ಧರ್ಮಂದ್ರ, ಮಂಜು ಎಂಬವರು ಥಳಿಸಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ಅಲ್ಲದೆ ಅಶೋಕ್ ಪತ್ನಿ ಮಂಜುಳಾ ಕೂಡ ಪೊರಕೆಯಿಂದ ಥಳಿಸಿದ್ದಾರೆ. ಪರಿಶಿಷ್ಟ ಜಾತಿ ಹೆಸರೇಳಿ ನಿಂದಿಸಿ, ಥಳಿಸಿದ್ದು ಆತ್ಮಹತ್ಯೆಗೆ ಕಾರಣವೆಂದು ಶ್ರೀನಿವಾಸ್ ಕುಟುಂಬಸ್ಥರು ದೂರು ನೀಡಿದ್ದಾರೆ.

ಮಾಲೂರು ಪೊಲೀಸ್ ಠಾಣೆಗೆ (Maluru Police Station) ಜಾತಿನಿಂದನೆ ಮಾಡಿರುವ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article