ಭುವನೇಶ್ವರ್: ಪಟಾಕಿ ಸಿಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಭಾನುವಾರ ಒಡಿಶಾದ ಭುವನೇಶ್ವರ್ ನಲ್ಲಿ ನಡೆದಿದೆ.
ಅಮರೇಶ್ ನಾಯಕ್ ಕೊಲೆಯಾದ ವ್ಯಕ್ತಿ. ಅಮರೇಶ್ ತನ್ನ ಸ್ನೇಹಿತರ ಜೊತೆ ರಾತ್ರಿ ಪಟಾಕಿ ಸಿಡಿಸುತ್ತಿದ್ದನು. ಈ ವೇಳೆ ಶಬ್ದ ಕೇಳಲಾಗದೆ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಪಟಾಕಿ ಸಿಡಿಸಬೇಡಿ ಎಂದು ಯುವಕರಿಗೆ ತಿಳಿಸಿದರು.
- Advertisement 2
- Advertisement 3
ಇದರಿಂದ ಕೋಪಗೊಂಡ ಅಮರೇಶ್ ಹಾಗೂ ಆತನ ಸ್ನೇಹಿತರು ಜನರ ಜೊತೆ ವಾಗ್ವಾದ ನಡೆಸಿದರು. ಹೀಗೆ ಯುವಕರು ಹಾಗೂ ಜನರ ನಡುವೆ ವಾಗ್ವಾದ ಹೆಚ್ಚಾದಾಗ ಗುಂಪೊಂದು ತಲ್ವಾರ್ ನಿಂದ ಅಮರೇಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ.
- Advertisement 4
ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಅಮರೇಶ್ನನ್ನು ಸ್ನೇಹಿತರು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದರು. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇತ್ತ ಅಮರೇಶ್ ಮೇಲೆ ಹಲ್ಲೆ ಮಾಡಿದ ಗುಂಪು ಪರಾರಿಯಾಗಿದೆ.
ಈ ಘಟನೆ ಏರ್ ಫೀಲ್ಡ್ ಪೊಲೀಸ್ ವ್ಯಕ್ತಿಯಲ್ಲಿರುವ ಸುಂದೇರ್ಪದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.